ಹೊಸಪೇಟೆ: ತಾಲ್ಲೂಕಿನ ಕಮಲಾಪುರ ಬಳಿ ಬೈಕ್ ನಿಂದ ಬಿದ್ದು ಇಬ್ಬರು ಯುವಕರು ಸೋಮವಾರ ಸಾವನ್ನಪ್ಪಿದ್ದಾರೆ.
ಕೊಪ್ಪಳದ ನವಲಿ ಗ್ರಾಮದ ರವಿ (22), ಕುಮಾರ್ (23) ಮೃತರು.ನಗರದಿಂದ ನವಲಿಗೆ ಹೋಗುವಾಗ ಬೈಕ್ ಮೇಲಿನ ನಿಯಂತ್ರಣ ಕಳೆದುಕೊಂಡು, ಕೆಳಗೆ ಬಿದ್ದು ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇಬ್ಬರು ಶಿವಮೊಗ್ಗದಲ್ಲಿ ಜೆಸಿಬಿ ಆಪರೇಟರ್ಸ್ ಗಳಾಗಿ ಕೆಲಸ ನಿರ್ವಹಿಸುತ್ತಿದ್ದರು. ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.