ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಸಿಲಲ್ಲಿ ಬೆವರು ಹರಿಸಿದ ಉಗ್ರಪ್ಪ

Last Updated 13 ಏಪ್ರಿಲ್ 2019, 13:43 IST
ಅಕ್ಷರ ಗಾತ್ರ

ಹೊಸಪೇಟೆ: ಕಾಂಗ್ರೆಸ್‌ ಅಭ್ಯರ್ಥಿ ವಿ.ಎಸ್‌. ಉಗ್ರಪ್ಪನವರು ಶನಿವಾರ ವಿಜಯನಗರ ಕ್ಷೇತ್ರ ವ್ಯಾಪ್ತಿಯಲ್ಲಿ ಸುಡುವ ಬಿಸಿಲು ಲೆಕ್ಕಿಸದೆ ಬಿರುಸಿನ ಪ್ರಚಾರ ಕೈಗೊಂಡರು.

ಬೆಳಿಗ್ಗೆಯಿಂದ ಮಧ್ಯಾಹ್ನದ ವರೆಗೆ ತಾಲ್ಲೂಕಿನಬೈಲುವದ್ದಿಗೇರಿ, ಪಾಪಿನಾಯಕನಹಳ್ಳಿ, ಧರ್ಮಸಾಗರ ಗ್ರಾಮಗಳಲ್ಲಿ ಮನೆ ಮನೆಗೆ ತೆರಳಿ, ಕರಪತ್ರಗಳನ್ನು ಕೊಟ್ಟು ಚುನಾವಣೆಯಲ್ಲಿ ಬೆಂಬಲಿಸುವಂತೆ ಕೋರಿದರು.

ಸಂಜೆ ನಗರದ ತಳವಾರಕೇರಿ, ಚಿತ್ರಕೇರಿ, ಮ್ಯಾಸಕೇರಿ, ಬಾಣದಕೇರಿಯಲ್ಲಿ ಮತ ಯಾಚಿಸಿದರು. ‘ಕ್ಷೇತ್ರದ ಜನತೆ ಉಪಚುನಾವಣೆಯಲ್ಲಿ ದೊಡ್ಡ ಅಂತರದಿಂದ ಗೆಲ್ಲಿಸಿದ್ದಾರೆ. ಸಾರ್ವತ್ರಿಕ ಚುನಾವಣೆಯಲ್ಲಿಯೂ ಬೆಂಬಲಿಸಿ, ಸಂಸತ್ತಿಗೆ ಕಳುಹಿಸುತ್ತಾರೆ ಎಂಬ ಭರವಸೆ ಇದೆ’ ಎಂದು ತಿಳಿಸಿದರು.

ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರಾದ ಟಿಂಕರ್‌ ರಫೀಕ್‌, ಅಮಾಜಿ ಹೇಮಣ್ಣ, ನಗರಸಭೆ ಅಧ್ಯಕ್ಷ ಗುಜ್ಜಲ್‌ ನಿಂಗಪ್ಪ, ಎ.ಪಿ.ಎಂ.ಸಿ. ಅಧ್ಯಕ್ಷ ಜಂಬಾನಹಳ್ಳಿ ಪರಶುರಾಮಪ್ಪ, ಮುಖಂಡರಾದ ಮೊಹಮ್ಮದ್‌ ಇಮಾಮ್‌ ನಿಯಾಜಿ, ಹಾಲಪ್ಪ,ಕವಿತಾ ಈಶ್ವರ ಸಿಂಗ್, ಗುಜ್ಜಲ್ ನಾಗರಾಜ, ಫಹೀಮ್ ಬಾಷಾ, ತಮ್ಮನೆಳೆಪ್ಪ, ಸೋಮಣ್ಣ, ಶೇಖರಪ್ಪ, ಲಕ್ಷ್ಮಣ್ಣ, ಅಯ್ಯಪ್ಪ, ಚಂದ್ರಪ್ಪ, ಬಸವರಾಜ, ಅಂಕ್ಲೇಶ್, ಗಂಗಾಧರ, ಮಧುರಚೆನ್ನ ಶಾಸ್ತ್ರಿ, ತಾರಿಹಳ್ಳಿ ವೆಂಕಟೇಶ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT