ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಸಪೇಟೆ: ಉಗ್ರಪ್ಪ ಪ್ರಚಾರ, ದೇಗುಲಕ್ಕೆ ಭೇಟಿ

Last Updated 7 ಏಪ್ರಿಲ್ 2019, 12:09 IST
ಅಕ್ಷರ ಗಾತ್ರ

ಹೊಸಪೇಟೆ: ಕಾಂಗ್ರೆಸ್‌ ಅಭ್ಯರ್ಥಿ ವಿ.ಎಸ್‌. ಉಗ್ರಪ್ಪ ಶನಿವಾರ ನಗರದ ವಿವಿಧ ಕಡೆಗಳಲ್ಲಿ ಪ್ರಚಾರ ಕೈಗೊಂಡರು.

ಅನಂತಶಯನಗುಡಿ, ನೆಹರೂ ಕಾಲೊನಿಯಲ್ಲಿ ಕಾಲ್ನಡಿಗೆಯಲ್ಲಿ ಸಂಚರಿಸಿ ಮತಯಾಚಿಸಿದರು. ಜಾತ್ರೆ ನಿಮಿತ್ತ ಸಣ್ಣಕ್ಕಿ ವೀರಭದ್ರೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ದೇವರ ದರ್ಶನ ಪಡೆದರು. ನಂತರ ಕಾಲೊನಿಯಲ್ಲಿ ಓಡಾಡಿ ಚುನಾವಣೆಯಲ್ಲಿ ಬೆಂಬಲಿಸುವಂತೆ ಮನವಿ ಮಾಡಿದರು.

ಬಳಿಕ ಅನಂತಶಯನಗುಡಿ ಸಪ್ತಾಂಜನೇಯ ದೇಗುಲಕ್ಕೆ ಭೇಟಿ ಕೊಟ್ಟು ದರ್ಶನ ಪಡೆದರು. ಅನಂತರ ಪಕ್ಷದ ಮುಖಂಡರು, ಮತದಾರರ ಮನೆಗೆ ಹೋಗಿ ಮತ ಯಾಚಿಸಿದರು. ತಾಲ್ಲೂಕಿನ ಕಾಕುಬಾಳು ಸಮೀಪದ ಜೋಗದಲ್ಲಿನ ಮಠಕ್ಕೆ ಭೇಟಿ ಕೊಟ್ಟು ರಾಜ ಭಾರತಿ ಸ್ವಾಮೀಜಿ ಆಶೀರ್ವಾದ ಪಡೆದರು.

ಮುಖಂಡರಾದ ಗುಜ್ಜಲ್ ನಾಗರಾಜ, ನಿಂಬಗಲ್ ರಾಮಕೃಷ್ಣ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT