ಹೊಸಪೇಟೆ: ಆನಂದ್ ಸಿಂಗ್ ಅವರಿಗೆ ಬಿಜೆಪಿ ಟಿಕೆಟ್ ಕೊಟ್ಟಿರುವುದಕ್ಕೆ ಆರಂಭದಿಂದಲೂ ಮುನಿಸಿಕೊಂಡು ಪಕ್ಷದ ಚಟುವಟಿಕೆಗಳಿಂದ ದೂರ ಉಳಿದಿರುವ ಸ್ಥಳೀಯ ಬಿಜೆಪಿ ಮುಖಂಡರು, ಸೋಮವಾರ ಮುಖ್ಯಮಂತ್ರಿ ನೇತೃತ್ವದಲ್ಲಿ ನಡೆದ ಬಹಿರಂಗ ಸಭೆಗೂ ಬರಲಿಲ್ಲ.
ಬಿಜೆಪಿ ಮುಖಂಡರಾದ ಎಚ್.ಆರ್.ಗವಿಯಪ್ಪ, ರಾಣಿ ಸಂಯುಕ್ತಾ, ಕಿಶೋರ್ ಪತ್ತಿಕೊಂಡ ಕಾರ್ಯಕ್ರಮದಿಂದ ದೂರ ಉಳಿದಿದ್ದರು. ಇನ್ನು ವಿಜಯನಗರ ಜಿಲ್ಲೆ ರಚನೆ ವಿಚಾರದಲ್ಲಿ ಆನಂದ್ ಸಿಂಗ್ ಮೇಲೆ ಬೇಸರಗೊಂಡಿರುವ ಹರಪನಹಳ್ಳಿ ಶಾಸಕ ಜಿ.ಕರುಣಾಕರ ರೆಡ್ಡಿ ಕೂಡ ಕಾರ್ಯಕ್ರಮಕ್ಕೆ ಗೈರಾಗಿದ್ದರು.
‘ಬಹು ಮುಖ್ಯವಾದ ಕೆಲಸದ ನಿಮಿತ್ತ ಗವಿಯಪ್ಪನವರು ಸಭೆಗೆ ಬಂದಿಲ್ಲ’ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮುಖಂಡ ಕಾರ್ತಿಕ್ ಘೋರ್ಪಡೆ ಕಾರ್ಯಕ್ರಮದಲ್ಲಿ ಹೇಳಿದರು.