ಬೆಳಿಗ್ಗೆ ಆರರಿಂದ ಹತ್ತು ಗಂಟೆಯ ವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಿರುವ ರಾಜ್ಯ ಸರ್ಕಾರ, ನಡೆದುಕೊಂಡು ಹೋಗಬೇಕು ಎಂಬ ನಿಯಮ ಜಾರಿಗೆ ತಂದಿತ್ತು. ಇದರಿಂದಾಗಿ ಗ್ರಾಮೀಣ ಪ್ರದೇಶದವರು, ವಯಸ್ಸಾದವರಿಗೆ ಬಹಳ ಸಮಸ್ಯೆ ಉಂಟಾಗಿತ್ತು. ಸಾಮಾಜಿಕ ಜಾಲತಾಣಗಳಲ್ಲಿಯೂ ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ಅದರ ಬಳಿಕ ಸರ್ಕಾರ ತನ್ನ ಆದೇಶ ಹಿಂಪಡೆದಿತ್ತು.