ಹೊಸಪೇಟೆ–ಚಿತ್ರದುರ್ಗ ಮಧ್ಯೆ ಚತುಷ್ಪಥ ಕಾಮಗಾರಿ ನಡೆಯುತ್ತಿದ್ದು, ಗುಂಡಾ ಸಸ್ಯೋದ್ಯಾನ ಬಳಿ ಮೇಲ್ಸೇತುವೆ ಹಾಗೂ ರಸ್ತೆ ವಿಸ್ತರಣೆ ಕೆಲಸ ನಡೆಯುತ್ತಿದೆ. ವಾಹನಗಳ ಸಂಚಾರಕ್ಕೆ ರಸ್ತೆ ಕಿರಿದಾಗಿದ್ದು, ಬುಧವಾರ ವಾಹನಗಳು ಎದುರು ಬದುರು ಬಂದು ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿತ್ತು. ಸುಮಾರು ಮೂರು ಗಂಟೆಗೂ ಅಧಿಕ ಸಮಯ ವಾಹನಗಳು ಸಾಲುಗಟ್ಟಿ ನಿಂತಿದ್ದವು.