‘ನಗರದಲ್ಲಿ ಐದು ನೂರಕ್ಕೂ ಹೆಚ್ಚು ಸರಕು ಸಾಗಣೆ ವಾಹನಗಳಿವೆ. ಹೀಗಾಗಿ ಕೆಲವೊಮ್ಮೆ ಬಾಡಿಗೆಯೇ ಸಿಗುವುದಿಲ್ಲ. ಪರಿಸ್ಥಿತಿ ಹೀಗಿರುವಾಗ ಪ್ರಯಾಣಿಕ ವಾಹನಗಳು ಸರಕು ಸಾಗಿಸುತ್ತೇವೆ. ಇದರಿಂದ ನಮಗೆ ತೊಂದರೆ ಉಂಟಾಗುತ್ತಿದೆ. ಸಂಸಾರ ನಡೆಸಲು ಆಗುತ್ತಿಲ್ಲ. ನಿಯಮದಂತೆ ಯಾರು ಯಾವ ಉದ್ದೇಶಕ್ಕಾಗಿ ವಾಹನ ಓಡಿಸಲು ಅನುಮತಿ ಪಡೆದುಕೊಂಡಿದ್ದಾರೋ ಅದರಂತೆ ನಡೆಸಬೇಕು. ಉಲ್ಲಂಘಿಸಿದವರ ವಿರುದ್ಧ ಕ್ರಮ ಜರುಗಿಸಬೇಕು. ಜತೆಗೆ ಸರಕು ಸಾಗಣೆ ವಾಹನಗಳಿಗೆ ನಗರದಲ್ಲಿ ಅಧಿಕೃತ ನಿಲ್ದಾಣ ವ್ಯವಸ್ಥೆ ಮಾಡಬೇಕು’ ಎಂದು ಆಗ್ರಹಿಸಿದರು.