ಹಾರ, ತುರಾಯಿ ಹಿಡಿದುಕೊಂಡು ಬಂದವರು ಅವರನ್ನು ಮುತ್ತಿಕೊಂಡರು. ಬಳಿಕ ಆನಂದ್ ಸಿಂಗ್ ಅವರು ತೆರೆದ ಜೀಪಿನಲ್ಲಿ ನಗರದಲ್ಲಿ ಸುತ್ತಾಡಿದರು. ಅವರೊಂದಿಗೆ ಅವರ ಬೆಂಬಲಿಗರ ದಂಡು ಇತ್ತು. ನಗರದ ಕಾಲೇಜು ರಸ್ತೆ, ರೋಟರಿ ವೃತ್ತ, ಬಸ್ ನಿಲ್ದಾಣ, ಮೂರಂಗಡಿ ವೃತ್ತ, ಹಂಪಿ ರಸ್ತೆಯಲ್ಲಿ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿತು. ಬಳಿಕ ಆನಂದ್ ಸಿಂಗ್ ಅವರು ವಿರೂಪಾಕ್ಷೇಶ್ವರನ ದರ್ಶನಕ್ಕೆ ಹಂಪಿ ಕಡೆಗೆ ಪಯಣ ಬೆಳೆಸಿದರು.