ಬಳ್ಳಾರಿ ಜಿಲ್ಲಾ ಅಧಿಕಾರಿಗಳಿಗೆ ವಿಜಯನಗರ ಪ್ರಭಾರ

ವಿಜಯನಗರ (ಹೊಸಪೇಟೆ): ನೂತನ ವಿಜಯನಗರ ಜಿಲ್ಲೆಯ ಎಲ್ಲ ಜಿಲ್ಲಾ ಮಟ್ಟದ ಅಧಿಕಾರಿಗಳ ಹುದ್ದೆಯ ಹೆಚ್ಚುವರಿ ಪ್ರಭಾರವನ್ನು ತಾತ್ಕಾಲಿಕವಾಗಿ ಬಳ್ಳಾರಿ ಜಿಲ್ಲೆಯ ಅಧಿಕಾರಿಗಳಿಗೆ ವಹಿಸಲಾಗಿದೆ.
ವಿಜಯನಗರ ಜಿಲ್ಲೆಗೆ ಸರ್ಕಾರದಿಂದ ಜಿಲ್ಲಾಮಟ್ಟದ ಅಧಿಕಾರಿಗಳ ಹುದ್ದೆಗಳನ್ನು ಭರ್ತಿ ಮಾಡಲು ಕಾಲಾವಕಾಶ ಬೇಕಾಗಿರುತ್ತದೆ. ನೂತನ ಜಿಲ್ಲೆಯ ಪೂರ್ವಸಿದ್ಧತೆಗಾಗಿ ಬಳ್ಳಾರಿಯ ಜಿಲ್ಲಾಮಟ್ಟದ ಎಲ್ಲ ಅಧಿಕಾರಿಗಳಿಗೆ ಹೆಚ್ಚುವರಿ ಪ್ರಭಾರ ವಹಿಸಲಾಗಿದೆ. ಫೆ. 8ರಿಂದ ಜಾರಿಗೆ ಬರುವಂತೆ ಎಲ್ಲ ಅಧಿಕಾರಿಗಳು ಕೆಲಸ ನಿರ್ವಹಿಸಬೇಕೆಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಆದೇಶದಲ್ಲಿ ತಿಳಿಸಿದ್ದಾರೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.