ಯಾವುದೇ ತುರ್ತು ಪರಿಸ್ಥಿತಿ ಇದ್ದರೂ ಸಾರ್ವಜನಿಕರು 112 ಸಂಖ್ಯೆಗೆ ಕರೆ ಮಾಡಿ ವಿಷಯ ತಿಳಿಸಬಹುದು. ಜಿಲ್ಲೆಯ ವಿವಿಧ ಉಪ ವಿಭಾಗಗಳಲ್ಲಿ ಇಆರ್ಎಸ್ಎಸ್ ವಾಹನಗಳು ಸಹಾಯವಾಣಿ ಸೇವೆಗೆ ನಿರತವಾಗಿದ್ದು, ದಿನದ 24 ಗಂಟೆ ಅವುಗಳ ಪ್ರಯೋಜನ ಪಡೆಯಬಹುದು ಎಂದು ಮಂಗಳವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ಹಂಚಿಕೊಂಡರು.