ಹೊಸಪೇಟೆ: ಗಣರಾಜ್ಯೋತ್ಸವದ ನಿಮಿತ್ತ ರಾಜಪಥದಲ್ಲಿ ಜ. 26ರಂದು ನಡೆಯಲಿರುವ ಪಥಸಂಚಲನದಲ್ಲಿ ಪಾಲ್ಗೊಳ್ಳಲಿರುವ ವಿಜಯನಗರ ಸಾಮ್ರಾಜ್ಯದ ವೈಭವ ಸಾರುವ ಸ್ತಬ್ಧಚಿತ್ರದಲ್ಲಿ ಕನ್ನಡ ಕಡೆಗಣಿಸಿರುವುದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಟೀಕೆ ವ್ಯಕ್ತವಾಗಿದೆ.
ಸ್ತಬ್ಧಚಿತ್ರದ ಮುಂಭಾಗದಲ್ಲಿ ಕನ್ನಡದ ಬದಲು ಹಿಂದಿ ಭಾಷೆಯಲ್ಲಿ ಕರ್ನಾಟಕ ಎಂದು ಬರೆಯಲಾಗಿದೆ. ಇಷ್ಟೇ ಅಲ್ಲ, ಕನ್ನಡದ ಬಾವುಟಗಳ ಬದಲು ಕೇಸರಿ ಧ್ವಜ ಬಳಸಲಾಗಿದೆ. ಇದೇ ವಿಷಯ ಈಗ ಚರ್ಚೆ, ಟೀಕೆಗೆ ಕಾರಣವಾಗಿದೆ.
ಇದೇನು ಒಕ್ಕೂಟ ವ್ಯವಸ್ಥೆಯ ದೇಶವೋ ಏನು? ಕನ್ನಡ ಬಾವುಟ ಎಲ್ಲಿ? ಗಣತಂತ್ರ ಅಂದರೆ ಒಂದು ಧರ್ಮದ ಬಾವುಟ ಹಾಕುವುದೇ?ಹೀಗೆ ಫೇಸಬುಕ್, ಟ್ವಿಟರ್ನಲ್ಲಿ ಕನ್ನಡಿಗರು ಪ್ರಶ್ನಿಸಿದ್ದಾರೆ.