ವಾರದ ಹಿಂದೆ ಮೈದುಂಬಿಕೊಂಡು ಹರಿದು, ಎದುರು ಬಸವಣ್ಣ ಮಂಟಪದ ವರೆಗೆ ನೀರು ನುಗ್ಗಿತ್ತು. ವಿಜಯ ವಿಠಲ ದೇವಸ್ಥಾನಕ್ಕೆ ಹೋಗುವ ತಳವಾರಘಟ್ಟ ರಸ್ತೆ ಸಂಪೂರ್ಣ ಜಲಾವೃತಗೊಂಡಿತ್ತು. ಜನ ತೆಪ್ಪಗಳಲ್ಲಿ ಓಡಾಡುವಂತಾಗಿತ್ತು. ಆದರೆ, ಈಗ ಎಲ್ಲವೂ ಮೊದಲಿನ ಸಹಜ ಸ್ಥಿತಿಗೆ ಬಂದಿದೆ. ಪ್ರವಾಸಿಗರು ಯಾವುದೇ ಆತಂಕವಿಲ್ಲದೆ ಓಡಾಡುತ್ತಿದ್ದಾರೆ. ನಿಧಾನವಾಗಿ ಪ್ರವಾಸಿಗರ ಸಂಖ್ಯೆ ಕೂಡ ಹೆಚ್ಚಾಗುತ್ತಿದೆ.