ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಚಿವ ಆನಂದ್ ಸಿಂಗ್‌ಗೆ ಭವ್ಯ ಸ್ವಾಗತ

Last Updated 19 ನವೆಂಬರ್ 2020, 1:33 IST
ಅಕ್ಷರ ಗಾತ್ರ

ಹೊಸಪೇಟೆ : ನೂತನ ವಿಜಯನಗರ ಜಿಲ್ಲೆ ರಚಿಸುವ ಪ್ರಸ್ತಾವಕ್ಕೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತಾತ್ವಿಕ ಅನುಮೋದನೆ ಕೊಡಿಸುವಲ್ಲಿ ಯಶಸ್ವಿಯಾದ ಜಿಲ್ಲಾ ಉಸ್ತುವಾರಿ ಸಚಿವ ಆನಂದ ಸಿಂಗ್ ಅವರನ್ನು ಬುಧವಾರ ನಗರದ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಸತ್ಕರಿಸಿದರು.

ಸಂಪುಟ ಸಭೆ ಮುಗಿಸಿಕೊಂಡು ನಗರಕ್ಕೆ ಆಗಮಿಸಿದ ಸಚಿವರನ್ನು ವಿವಿಧ ಸಂಘಟನೆಗಳ ಮುಖಂಡರು ಭವ್ಯವಾಗಿ ಸ್ವಾಗತಿಸಿದರು. ಬಿಜೆಪಿ ಮುಖಂಡರು, ಕಾರ್ಯಕರ್ತರು ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಸಚಿವ ಆನಂದ ಸಿಂಗ್ ಅವರಿಗೆ ಜೈಕಾರ ಹಾಕಿದರು.

‘ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ವಿಜಯನಗರ ಜಿಲ್ಲೆ ರಚಿಸುವ ಐತಿಹಾಸಿಕ ತೀರ್ಮಾನ ಕೈಗೊಂಡಿದೆ. ನಾಡಿಗೆ ಹೆಮ್ಮೆ ತರುವ ನಿರ್ಧಾರ ಕೈಗೊಂಡ ಸಿಎಂ ಹಾಗೂ ಸಂಪುಟದ ಎಲ್ಲ ಸದಸ್ಯರನ್ನು ಅಭಿನಂದಿಸುತ್ತೇವೆ’ ಎಂದು ಸಚಿವ ಆನಂದ ಸಿಂಗ್ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT