ಚಿರತೆ ಬೋನಿಗೆ ಬಿದ್ದ ವಿಷಯ ಗ್ರಾಮದಲ್ಲಿ ಹರಡುತ್ತಿದ್ದಂತೆ ಜನತೆ ಸ್ಥಳಕ್ಕೆ ಧಾವಿಸಿ ಕುತೂಹಲದಿಂದ ವೀಕ್ಷಿಸಿದರು. ನಂತರ ಅರಣ್ಯ ಇಲಾಖೆಯವರು ಚಿರತೆಯನ್ನು ಸ್ಥಳಾಂತರಿಸಿದರು. ಗ್ರಾಮದ ಕಣಿವೆ ಮಾರೆಮ್ಮ ದೇವಸ್ಥಾನ ಮತ್ತು ಗ್ರಾಮದ ಸುತ್ತಲೂ ಇನ್ನು ಚಿರತೆಗಳಿದ್ದು, ಸೆರೆಗೆ ಕ್ರಮ ತೆಗೆದುಕೊಳ್ಳುವಂತೆ ಗ್ರಾಮಸ್ಥರು ಇಲಾಖೆ ಮೇಲಧಿಕಾರಿಗಳನ್ನು ಒತ್ತಾಯಿಸಿದರು.