ಉಪ ಅರಣ್ಯ ಸಂರಕ್ಷಣಾಧಿಕಾರಿ ಸೋನಲ್ ವೃಷಿಣಿ ಮಾತನಾಡಿ, ‘ಈ ಸಲ ವನ್ಯಜೀವಿ ಸಪ್ತಾಹವನ್ನು ಬಹಳ ಭಿನ್ನವಾಗಿ ಆಚರಿಸಲಾಗುತ್ತಿದೆ. ಶಾಲಾ ಕಾಲೇಜಿನ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವುದಕ್ಕಾಗಿ ಚಿತ್ರಕಲೆ, ಪ್ರಬಂಧ, ಭಾಷಣ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ. ಒಂದಿಡಿ ವಾರ ವಾಜಪೇಯಿ ಉದ್ಯಾನಕ್ಕೆ ಉಚಿತ ಪ್ರವೇಶ ಕಲ್ಪಿಸಲಾಗುತ್ತಿದೆ’ ಎಂದು ಹೇಳಿದರು.