ಹೆಚ್ಚುವರಿ ಎಸ್.ಪಿ. ಬಿ.ಎನ್. ಲಾವಣ್ಯ ಭೇಟಿ ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ‘ಮೇಲ್ನೋಟಕ್ಕೆ ಕೊಲೆ ನಡೆದಿರುವ ಸಂಶಯ ಮೂಡುತ್ತದೆ. ಮರಣೋತ್ತರ ಪರೀಕ್ಷೆ, ಬೆರಳಚ್ಚು ತಜ್ಞರ ತಂಡ, ಶ್ವಾನದಳ ತಂಡದವರ ವರದಿ, ತನಿಖಾ ತಂಡದ ಸಂಪೂರ್ಣ ವರದಿ ನಂತರ ನೈಜ ಚಿತ್ರಣ ತಿಳಿಯಲಿದೆ. ಸಿಪಿಐ ನೇತೃತ್ವದಲ್ಲಿ ತನಿಖೆ ನಡೆಯಲಿದೆ’ ಎಂದು ವಿವರಿಸಿದರು.