<p><strong>ಬಳ್ಳಾರಿ:</strong> ‘ಕೆಲಸದಿಂದ ತೆಗೆದಿರುವ ಸಿಬ್ಬಂದಿಯನ್ನು ನಿವೃತ್ತಿವರೆಗೆ ಮುಂದುವರಿಸಬೇಕು, 8 ತಿಂಗಳ ಬಾಕಿ ವೇತನವನ್ನು ನೀಡಬೇಕು’ ಎಂದು ಆಗ್ರಹಿಸಿ ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದ ನೂರಾರು ಸದಸ್ಯರು ನಗರದಲ್ಲಿ ಮಂಗಳವಾರ ಸಚಿವ ಬಿ.ಶ್ರೀರಾಮುಲು ಮನೆ ಮುಂದೆ ಧರಣಿ ನಡೆಸಿದರು.</p>.<p>‘ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ 3 ಸಾವಿರ ಹುದ್ದೆಗಳಿಗೆ ನೇಮಕಾತಿ ನಡೆದ ಕಾರಣ ಗುತ್ತಿಗೆ ನೌಕರರನ್ನು ಕೆಲಸದಿಂದ ತೆಗೆಯಲಾಗಿದೆ.ಸಿಬ್ಬಂದಿಯು ಇ.ಎಸ್.ಐ, ಪಿಎಫ್ ಸೌಲಭ್ಯದಿಂದ ವಂಚಿತರಾಗಿದ್ದಾರೆ. ಅವರನ್ನು ನಿವೃತ್ತಿವರೆಗೆ ಸೇವೆಯಲ್ಲಿ ಮುಂದುವರಿಸಬೇಕು. ಬಾಕಿ ವೇತನವನ್ನು ಬಿಡುಗಡೆ ಮಾಡಬೇಕು’ ಎಂದು ಸಂಘದ ರಾಜ್ಯ ಘಟಕದ ಅಧ್ಯಕ್ಷ ನಿತ್ಯಾನಂದ ಸ್ವಾಮಿ ಆಗ್ರಹಿಸಿದರು.</p>.<p>‘ಸಚಿವರ ಮನೆ ಮುಂದೆ ಧರಣಿ ನಡೆಸಿದಾಗ ಪರಿಹಾರದ ಭರವಸೆ ಸಿಗುತ್ತದೆ. ಆದರೆ ನಂತರ ಅತಂತ್ರ ಸ್ಥಿತಿ ಮುಂದುವರಿಯುತ್ತದೆ. ಈಗ 3ನೇ ಬಾರಿ ಧರಣಿಯನ್ನು ಹಮ್ಮಿಕೊಳ್ಳಲಾಗಿದೆ. ಕೆಲಸವೂ ಇಲ್ಲದೇ, ವೇತನವೂ ಇಲ್ಲದೇ ಬದುಕು ಕಷ್ಟಕರವಾಗಿದೆ’ ಎಂದು ಹಾವೇರಿ ಜಿಲ್ಲೆಯ ಶಾಂತಾ ಅಳಲು ತೋಡಿಕೊಂಡರು.</p>.<p>ಬೆಂಗಳೂರು, ವಿಜಯಪುರ, ಕಲಬುರಗಿ, ಹಾಸನ, ಚಿಕ್ಕಮಗಳೂರು, ಮಂಗಳೂರು ಸೇರಿ ರಾಜ್ಯದ ವಿವಿಧೆಡೆಯಿಂದ ಬಂದಿದ್ದರು. ಧರಣಿ ಕೈಬಿಡುವಂತೆ ಪೊಲೀಸರು ಮನವಿ ಮಾಡಿದರೂ ಕೇಳಲಿಲ್ಲ. ‘ಭರವಸೆ ಈಡೇರುವವರೆಗೆ ಧರಣಿ ಕೈಬಿಡುವ ಮಾತೇ ಇಲ್ಲ’ ಎಂದು<br />ಪ್ರತಿಭಟನಾನಿರತರು ಹೇಳಿದರು.</p>.<p>ಪ್ರತಿಭಟನಕಾರರನ್ನು ರಾತ್ರಿ ಪೊಲೀಸರು ಬಂಧಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ:</strong> ‘ಕೆಲಸದಿಂದ ತೆಗೆದಿರುವ ಸಿಬ್ಬಂದಿಯನ್ನು ನಿವೃತ್ತಿವರೆಗೆ ಮುಂದುವರಿಸಬೇಕು, 8 ತಿಂಗಳ ಬಾಕಿ ವೇತನವನ್ನು ನೀಡಬೇಕು’ ಎಂದು ಆಗ್ರಹಿಸಿ ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದ ನೂರಾರು ಸದಸ್ಯರು ನಗರದಲ್ಲಿ ಮಂಗಳವಾರ ಸಚಿವ ಬಿ.ಶ್ರೀರಾಮುಲು ಮನೆ ಮುಂದೆ ಧರಣಿ ನಡೆಸಿದರು.</p>.<p>‘ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ 3 ಸಾವಿರ ಹುದ್ದೆಗಳಿಗೆ ನೇಮಕಾತಿ ನಡೆದ ಕಾರಣ ಗುತ್ತಿಗೆ ನೌಕರರನ್ನು ಕೆಲಸದಿಂದ ತೆಗೆಯಲಾಗಿದೆ.ಸಿಬ್ಬಂದಿಯು ಇ.ಎಸ್.ಐ, ಪಿಎಫ್ ಸೌಲಭ್ಯದಿಂದ ವಂಚಿತರಾಗಿದ್ದಾರೆ. ಅವರನ್ನು ನಿವೃತ್ತಿವರೆಗೆ ಸೇವೆಯಲ್ಲಿ ಮುಂದುವರಿಸಬೇಕು. ಬಾಕಿ ವೇತನವನ್ನು ಬಿಡುಗಡೆ ಮಾಡಬೇಕು’ ಎಂದು ಸಂಘದ ರಾಜ್ಯ ಘಟಕದ ಅಧ್ಯಕ್ಷ ನಿತ್ಯಾನಂದ ಸ್ವಾಮಿ ಆಗ್ರಹಿಸಿದರು.</p>.<p>‘ಸಚಿವರ ಮನೆ ಮುಂದೆ ಧರಣಿ ನಡೆಸಿದಾಗ ಪರಿಹಾರದ ಭರವಸೆ ಸಿಗುತ್ತದೆ. ಆದರೆ ನಂತರ ಅತಂತ್ರ ಸ್ಥಿತಿ ಮುಂದುವರಿಯುತ್ತದೆ. ಈಗ 3ನೇ ಬಾರಿ ಧರಣಿಯನ್ನು ಹಮ್ಮಿಕೊಳ್ಳಲಾಗಿದೆ. ಕೆಲಸವೂ ಇಲ್ಲದೇ, ವೇತನವೂ ಇಲ್ಲದೇ ಬದುಕು ಕಷ್ಟಕರವಾಗಿದೆ’ ಎಂದು ಹಾವೇರಿ ಜಿಲ್ಲೆಯ ಶಾಂತಾ ಅಳಲು ತೋಡಿಕೊಂಡರು.</p>.<p>ಬೆಂಗಳೂರು, ವಿಜಯಪುರ, ಕಲಬುರಗಿ, ಹಾಸನ, ಚಿಕ್ಕಮಗಳೂರು, ಮಂಗಳೂರು ಸೇರಿ ರಾಜ್ಯದ ವಿವಿಧೆಡೆಯಿಂದ ಬಂದಿದ್ದರು. ಧರಣಿ ಕೈಬಿಡುವಂತೆ ಪೊಲೀಸರು ಮನವಿ ಮಾಡಿದರೂ ಕೇಳಲಿಲ್ಲ. ‘ಭರವಸೆ ಈಡೇರುವವರೆಗೆ ಧರಣಿ ಕೈಬಿಡುವ ಮಾತೇ ಇಲ್ಲ’ ಎಂದು<br />ಪ್ರತಿಭಟನಾನಿರತರು ಹೇಳಿದರು.</p>.<p>ಪ್ರತಿಭಟನಕಾರರನ್ನು ರಾತ್ರಿ ಪೊಲೀಸರು ಬಂಧಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>