ಹೊಸಪೇಟೆ: ವಿಶ್ವ ಪರಿಸರ ದಿನದ ಪ್ರಯುಕ್ತ ಇಲ್ಲಿನ ಮುನ್ಸಿಪಲ್ ಪದವಿಪೂರ್ವ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಸಸಿ ನೆಡುವ ಕಾರ್ಯಕ್ರಮಕ್ಕೆ ಸೆಷನ್ಸ್ ನ್ಯಾಯಾಧೀಶ ಆನಂದ ಟಿ.ಚವ್ಹಾಣ್ ಅವರು ಸಸಿಗೆ ನೀರೆರೆದು ಚಾಲನೆ ನೀಡಿದರು.
ನ್ಯಾಯಾಧೀಶರಾದ ಸಿ.ಎಸ್. ಶಿವನಗೌಡ, ಬಿ.ಚನ್ನಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಎಲ್.ಡಿ.ಜೋಷಿ, ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ಟಿ.ವೆಂಕೋಬಪ್ಪ, ವಲಯ ಅರಣ್ಯ ಅಧಿಕಾರಿ ಎನ್.ಬಸವರಾಜ, ಎಸಿ.ಎಫ್.ಮೋಹನ್ ಇದ್ದಾರೆ.
ಮುಂದುವರೆದ ರಾಷ್ಟ್ರಗಳಿಂದ ಪರಿಸರ ನಾಶವಾಗುತ್ತಿದೆ. ಅದಕ್ಕೆ ಕಡಿವಾಣ ಬೀಳಬೇಕು. ಪರಿಸರದಲ್ಲಿ ಸ್ವಲ್ಪ ಏರುಪೇರಾದರು ಜಗತ್ತಿನ ಎಲ್ಲ ರಾಷ್ಟ್ರಗಳ ಮೇಲೆ ಅದರ ಪರಿಣಾಮ ಬೀರುತ್ತದೆ ಎಂದು ವಕೀಲ ಕರುಣಾನಿಧಿ ಉಪನ್ಯಾಸ ನೀಡಿದರು.