ವಿಸ್ತರಣಾ ಮುಂದಾಳು ಡಾ. ಸಿ.ಎಂ.ಕಾಲಿಬಾವಿ ಮಾತನಾಡಿ, ದೇಶದ ಜನರಿಗೆ ಗುಣಮಟ್ಟದ ಆಹಾರ ಉಣಬಡಿಸುವ ರೈತರ ಕಾರ್ಯವನ್ನು ಎಲ್ಲರೂ ಸ್ಮರಿಸಬೇಕು. ಆಹಾರವನ್ನು ಮಿತವಾಗಿ ಬಳಸುವುದರಿಂದ ದೇಶ ಸದೃಢವಾಗುತ್ತದೆ. ನಿತ್ಯ ಆಹಾರದಲ್ಲಿ ಸಿರಿಧಾನ್ಯಗಳಾದ ನವಣೆ, ರಾಗಿ, ಸಜ್ಜೆ, ಕೊರಲು, ಬರಗು ಬಳಸುವುದರಿಂದ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದು ಹೇಳಿದರು.