ಹೊಸಪೇಟೆ: ವಿಶ್ವ ಹುಲಿ ದಿನದ ಪ್ರಯುಕ್ತ ಅರಣ್ಯ ಸಚಿವ ಆನಂದ್ ಸಿಂಗ್ ಅವರು ಬುಧವಾರ ತಾಲ್ಲೂಕಿನ ಕಮಲಾಪುರ ಬಳಿಯ ಅಟಲ್ ಬಿಹಾರಿ ವಾಜಪೇಯಿ ಜೈವಿಕ ಉದ್ಯಾನದ ಹುಲಿಯನ್ನು ದತ್ತು ತೆಗೆದುಕೊಂಡಿದ್ದಾರೆ.
‘ಸಚಿವ ಆನಂದ್ ಸಿಂಗ್ ಅವರು ₹1 ಲಕ್ಷ ಪಾವತಿಸಿ, ಸಿಂಧೂ ಹೆಸರಿನ ಹುಲಿಯನ್ನು ಒಂದು ವರ್ಷದ ಅವಧಿಗೆ ದತ್ತು ಸ್ವೀಕರಿಸಿದ್ದಾರೆ’ ಎಂದು ಉದ್ಯಾನದ ಉಪ ಅರಣ್ಯ ಸಂರಕ್ಷಣಾಧಿಕಾರಿ ಎಂ.ಎನ್. ಕಿರಣ್ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.
‘ಇದು ಪ್ರಚಾರಕ್ಕಾಗಿ ಅಲ್ಲ, ಬೇರೆಯವರಿಗೆ ಪ್ರೇರಣೆ ತುಂಬಲು ಹುಲಿ ದತ್ತು ಪಡೆದಿರುವೆ’ ಎಂದು ಆನಂದ್ ಸಿಂಗ್ ಹೇಳಿದ್ದಾರೆ.