<p><strong>ಬಳ್ಳಾರಿ:</strong> ಜಿಲ್ಲೆಯಲ್ಲಿ ಅತ್ಯಧಿಕ ಮಳೆ ಸುರಿಯುವ ಸಾಧ್ಯತೆ ಇರುವುದರಿಂದ ಜಿಲ್ಲಾಡಳಿತ ಮುಂಜಾಗ್ರತೆ ಕ್ರಮಗಳನ್ನು ಮಂಗಳವಾರದಿಂದಲೇ ಕೈಗೊಂಡಿದ್ದು, ಎಲ್ಲ ಉಪವಿಭಾಗಾಧಿಕಾರಿಗಳು ಹಾಗೂ ತಹಶೀಲ್ದಾರರು ಕೇಂದ್ರ ಸ್ಥಾನ ಬಿಟ್ಟು ತೆರಳದಂತೆ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಸೂಚನೆ ನೀಡಿದ್ದಾರೆ.</p>.<p>ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರವೇ ಮಂಗಳವಾರ ಜಿಲ್ಲೆಯ ವಿವಿಧೆಡೆ ಬಿರುಗಾಳಿಯಿಂದ ಕೂಡಿದ ಭಾರಿ ಮಳೆ ಸುರಿದಿತ್ತು. ಬುಧವಾರವೂ ಜಿಲ್ಲೆಯ ವಿವಿಧೆಡೆ ಮಳೆ ಸುರಿದಿದೆ. ಬೆಳೆ ನಷ್ಟವಾಗಿದೆ. ಹಲವೆಡೆ ಕೆರೆಗಳು ಕೋಡಿ ಬಿದ್ದಿವೆ. ಮನೆಗಳಿಗೆ ನೀರು ನುಗ್ಗಿದೆ. ಹಲವು ಮನೆಗಳಿಗೆ ಹಾನಿಯಾಗಿದೆ.</p>.<p><strong>ಜಂಟಿ ಸಮೀಕ್ಷೆ:</strong> ಮನೆ ಹಾಗೂ ಬೆಳೆ ನಷ್ಟಕ್ಕೆ ಸಂಬಂಧಿಸಿದಂತೆ ಕೃಷಿ, ತೋಟಗಾರಿಕೆ ಮತ್ತು ಕಂದಾಯ ಇಲಾಖೆಯ ಜಂಟಿ ಸಮೀಕ್ಷೆಯನ್ನೂ ತ್ವರಿತವಾಗಿ ನಡೆಸುವಂತೆ ಸೂಚಿಸಲಾಗಿದೆ’ ಎಂದು ಜಿಲ್ಲಾಧಿಕಾರಿ ನಕುಲ್ ‘ಪ್ರಜವಾಣಿ’ಗೆ ಬುಧವಾರ ತಿಳಿಸಿದರು.</p>.<p>‘ಮಳೆ ನೀರು ಹೆಚ್ಚು ಹರಿಯುವ ಸ್ಥಳಗಳಿಂದ ವಾಸ ತೆರವುಗೊಳಿಸುವಂತೆ ಸೂಚಿಸಲಾಗಿದೆ. ತುಂಬಲಿರುವ ಮತ್ತು ತುಂಬಿರುವ ಹಳ್ಳ, ಕೆರೆಗಳ ಬಳಿ ಮುನ್ನೆಚ್ಚರಿಕೆ ವಹಿಸಲಾಗಿದೆ.ಹಾನಿಯಾದ ಮನೆಗಳಿರುವ ಪ್ರದೇಶಕ್ಕೂ ಭೇಟಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ’ ಎಂದು ಹೇಳಿದರು.</p>.<p><strong>ಅಧಿಕ ಮಳೆ:</strong> ಜಿಲ್ಲೆಯಾದ್ಯಂತ ಅಕ್ಟೋಬರ್ ತಿಂಗಳಲ್ಲಿ ಇದುವರೆಗೆ ವಾಡಿಕೆಗಿಂತ ಅಧಿಕ ಮಳೆ ಸುರಿದಿದೆ. ಐದು ದಿನಗಳಿಂದ ಜಿಲ್ಲೆಯ ಎಲ್ಲತಾಲ್ಲೂಕುಗಳಲ್ಲೂ ಮಳೆ ಸುರಿಯುತ್ತಿದೆ. ಸಂಡೂರಿನಲ್ಲಿ 9.60 ಸೆಂ.ಮೀ, ಹಡಗಲಿಯಲ್ಲಿ ಗರಿಷ್ಠ 6.14 ಸೆಂ.ಮೀ, ಕೊಟ್ಟೂರಿನಲ್ಲಿ 6.42 ಸೆಂ.ಮೀ ಮಳೆಯಾಗಿದೆ. ಉಳಿದ ತಾಲ್ಲೂಕುಗಳಲ್ಲಿ ಸರಾಸರಿ2ರಿಂದ 3 ಸೆಂ.ಮೀ ಮಳೆಯಾಗಿದೆ. ಪ್ರಸಕ್ತ ವಾರವೂ ಈ ತಾಲ್ಲೂಕುಗಳಲ್ಲಿ ಧಾರಾಕಾರ ಮಳೆ ಸುರಿಯುವ ನಿರೀಕ್ಷೆ ಇದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ:</strong> ಜಿಲ್ಲೆಯಲ್ಲಿ ಅತ್ಯಧಿಕ ಮಳೆ ಸುರಿಯುವ ಸಾಧ್ಯತೆ ಇರುವುದರಿಂದ ಜಿಲ್ಲಾಡಳಿತ ಮುಂಜಾಗ್ರತೆ ಕ್ರಮಗಳನ್ನು ಮಂಗಳವಾರದಿಂದಲೇ ಕೈಗೊಂಡಿದ್ದು, ಎಲ್ಲ ಉಪವಿಭಾಗಾಧಿಕಾರಿಗಳು ಹಾಗೂ ತಹಶೀಲ್ದಾರರು ಕೇಂದ್ರ ಸ್ಥಾನ ಬಿಟ್ಟು ತೆರಳದಂತೆ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಸೂಚನೆ ನೀಡಿದ್ದಾರೆ.</p>.<p>ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರವೇ ಮಂಗಳವಾರ ಜಿಲ್ಲೆಯ ವಿವಿಧೆಡೆ ಬಿರುಗಾಳಿಯಿಂದ ಕೂಡಿದ ಭಾರಿ ಮಳೆ ಸುರಿದಿತ್ತು. ಬುಧವಾರವೂ ಜಿಲ್ಲೆಯ ವಿವಿಧೆಡೆ ಮಳೆ ಸುರಿದಿದೆ. ಬೆಳೆ ನಷ್ಟವಾಗಿದೆ. ಹಲವೆಡೆ ಕೆರೆಗಳು ಕೋಡಿ ಬಿದ್ದಿವೆ. ಮನೆಗಳಿಗೆ ನೀರು ನುಗ್ಗಿದೆ. ಹಲವು ಮನೆಗಳಿಗೆ ಹಾನಿಯಾಗಿದೆ.</p>.<p><strong>ಜಂಟಿ ಸಮೀಕ್ಷೆ:</strong> ಮನೆ ಹಾಗೂ ಬೆಳೆ ನಷ್ಟಕ್ಕೆ ಸಂಬಂಧಿಸಿದಂತೆ ಕೃಷಿ, ತೋಟಗಾರಿಕೆ ಮತ್ತು ಕಂದಾಯ ಇಲಾಖೆಯ ಜಂಟಿ ಸಮೀಕ್ಷೆಯನ್ನೂ ತ್ವರಿತವಾಗಿ ನಡೆಸುವಂತೆ ಸೂಚಿಸಲಾಗಿದೆ’ ಎಂದು ಜಿಲ್ಲಾಧಿಕಾರಿ ನಕುಲ್ ‘ಪ್ರಜವಾಣಿ’ಗೆ ಬುಧವಾರ ತಿಳಿಸಿದರು.</p>.<p>‘ಮಳೆ ನೀರು ಹೆಚ್ಚು ಹರಿಯುವ ಸ್ಥಳಗಳಿಂದ ವಾಸ ತೆರವುಗೊಳಿಸುವಂತೆ ಸೂಚಿಸಲಾಗಿದೆ. ತುಂಬಲಿರುವ ಮತ್ತು ತುಂಬಿರುವ ಹಳ್ಳ, ಕೆರೆಗಳ ಬಳಿ ಮುನ್ನೆಚ್ಚರಿಕೆ ವಹಿಸಲಾಗಿದೆ.ಹಾನಿಯಾದ ಮನೆಗಳಿರುವ ಪ್ರದೇಶಕ್ಕೂ ಭೇಟಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ’ ಎಂದು ಹೇಳಿದರು.</p>.<p><strong>ಅಧಿಕ ಮಳೆ:</strong> ಜಿಲ್ಲೆಯಾದ್ಯಂತ ಅಕ್ಟೋಬರ್ ತಿಂಗಳಲ್ಲಿ ಇದುವರೆಗೆ ವಾಡಿಕೆಗಿಂತ ಅಧಿಕ ಮಳೆ ಸುರಿದಿದೆ. ಐದು ದಿನಗಳಿಂದ ಜಿಲ್ಲೆಯ ಎಲ್ಲತಾಲ್ಲೂಕುಗಳಲ್ಲೂ ಮಳೆ ಸುರಿಯುತ್ತಿದೆ. ಸಂಡೂರಿನಲ್ಲಿ 9.60 ಸೆಂ.ಮೀ, ಹಡಗಲಿಯಲ್ಲಿ ಗರಿಷ್ಠ 6.14 ಸೆಂ.ಮೀ, ಕೊಟ್ಟೂರಿನಲ್ಲಿ 6.42 ಸೆಂ.ಮೀ ಮಳೆಯಾಗಿದೆ. ಉಳಿದ ತಾಲ್ಲೂಕುಗಳಲ್ಲಿ ಸರಾಸರಿ2ರಿಂದ 3 ಸೆಂ.ಮೀ ಮಳೆಯಾಗಿದೆ. ಪ್ರಸಕ್ತ ವಾರವೂ ಈ ತಾಲ್ಲೂಕುಗಳಲ್ಲಿ ಧಾರಾಕಾರ ಮಳೆ ಸುರಿಯುವ ನಿರೀಕ್ಷೆ ಇದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>