ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯೇಸು ಮೂರ್ತಿ ಭಗ್ನ

Last Updated 1 ಜನವರಿ 2020, 15:22 IST
ಅಕ್ಷರ ಗಾತ್ರ

ಹೊಸಪೇಟೆ: ತಾಲ್ಲೂಕಿನ ಕಮಲಾಪುರದ ಸಂತ ಅಂಥೋನಿ ಚರ್ಚ್‌ ಆವರಣದಲ್ಲಿ ನಿರ್ಮಿಸಿದ್ದ ಗೋದಲಿಯೊಳಗಿನ ಯೇಸು ಕ್ರಿಸ್ತನ ಚಿಕ್ಕ ಮೂರ್ತಿಯನ್ನು ದುಷ್ಕರ್ಮಿಗಳು ಬುಧವಾರ ಸಂಜೆ ಭಗ್ನಗೊಳಿಸಿದ್ದಾರೆ.

ಕತ್ತು, ಕೈಗಳನ್ನು ಮುರಿದು ಮೂರ್ತಿಯನ್ನು ಭಗ್ನಗೊಳಿಸಲಾಗಿದೆ. ‘ಚರ್ಚ್‌ನಲ್ಲಿ ಯಾರೂ ಇಲ್ಲದ ವೇಳೆ ದುಷ್ಕರ್ಮಿಗಳು ಈ ದುಷ್ಕೃತ್ಯ ಎಸಗಿದ್ದಾರೆ. ವಿಷಯ ಗೊತ್ತಾಗುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದೆ. ಸಂಶಯದ ಆಧಾರದ ಮೇಲೆ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಈ ಕುರಿತು ಇನ್ನಷ್ಟೇ ಪ್ರಕರಣ ದಾಖಲಾಗಬೇಕಿದೆ’ ಎಂದು ಪೊಲೀಸ್‌ ಅಧಿಕಾರಿ ‘ಪ್ರಜಾವಾಣಿ’ಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT