‘ಸಂಸತ್ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಷಣ ಮಾಡುವಾಗ ಕಾಂಗ್ರೆಸ್ ಪಕ್ಷದವರು ಗದ್ದಲ ಗಲಾಟೆ ಮಾಡಿ ಭಾಷಣಕ್ಕೆ ಅಡ್ಡಿಪಡಿಸುವ ಪ್ರಯತ್ನ ಮಾಡಿದರು. ಸಂಸತ್ನಲ್ಲಿ ಕಳೆದ 70 ವರ್ಷಗಳಲ್ಲಿ ಈ ರೀತಿ ಗದ್ದಲ ಗಲಾಟೆ ಯಾರೂ ಮಾಡಿರಲಿಲ್ಲ. ಮತ್ತೊಂದೆಡೆ ಕರ್ನಾಟಕಕ್ಕೆ ಪ್ರಧಾನಿ ಬರುತ್ತಿದ್ದಾರೆ ಎಂಬುದು ತಿಳಿದ ತಕ್ಷಣವೇ ಬಂದ್ ಮಾಡಿಸುವ ಹುನ್ನಾರವನ್ನು ಕಾಂಗ್ರೆಸ್ ಪಕ್ಷ ಮಾಡಿತ್ತು’ ಎಂದು ಆರೋಪಿಸಿದರು.