ಒಕ್ಕೂಟವು ಈ ಸಂಬಂಧ ರಾಜ್ಯ ಚುನಾವಣೆ ಆಯೋಗದ ಕಾರ್ಯದರ್ಶಿಗೆ ಪತ್ರ ಬರೆದಿದೆ. ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಕ್ಷೇತ್ರಗಳ ಮೀಸಲಾತಿಯು ಅವೈಜ್ಞಾನಿಕ ಹಾಗೂ ಸಂವಿಧಾನದ ಮೂಲ ಆಶಯಗಳಿಗೆ ವಿರುದ್ಧವಾಗಿದೆ. ವಿಧಾನಸಭೆ, ಲೋಕಸಭೆಯಲ್ಲಿ ರಾಜಕೀಯ ಪ್ರಾತಿನಿಧ್ಯವಿಲ್ಲದ ಅಸಂಖ್ಯ ಹಿಂದುಳಿದ ಜಾತಿಗಳನ್ನು ಸ್ಥಳೀಯ ಸಂಸ್ಥೆಗಳಿಂದಲೂ ದೂರವಿಡುವ ಹುನ್ನಾರ ಅಡಗಿದೆ ಎಂದು ಒಕ್ಕೂಟದ ಅಧ್ಯಕ್ಷ ವೈ. ಯಮುನೇಶ್, ಪ್ರಧಾನ ಕಾರ್ಯದರ್ಶಿ ಯು. ಆಂಜನೇಯಲು ಆತಂಕ ವ್ಯಕ್ತಪಡಿಸಿದ್ದಾರೆ.