ಬೆಂಗಳೂರು: ‘ಬೃಹದಾಕಾರವಾಗಿ ಬೆಳೆಯುತ್ತಿರುವ ನಗರಗಳಲ್ಲಿ ಸೈಕಲ್ ಬಳಕೆಯಿಂದ ಮಾಲಿನ್ಯ ತಡೆಗಟ್ಟಬಹುದು. ಉತ್ತಮ ಆರೋಗ್ಯ ಹಾಗೂ ದೇಹವನ್ನು ಸದೃಢವಾಗಿಟ್ಟುಕೊಳ್ಳಲು ಸೈಕಲ್ ಬಳಕೆಯ ಹವ್ಯಾಸ ರೂಢಿಸಿಕೊಳ್ಳಬೇಕು’ ಎಂದು ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಕೆ.ಆರ್.ವೇಣುಗೋಪಾಲ್ ಹೇಳಿದರು
ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ (ಎನ್ಎಸ್ಎಸ್) ಘಟಕದ ವತಿಯಿಂದ ಶನಿವಾರ ಆಯೋಜಿಸಿದ್ದ ‘ಫಿಟ್ ಇಂಡಿಯಾ ಸೈಕಲ್ ರ್ಯಾಲಿ’ಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಎನ್ಎಸ್ಎಸ್ ಸಂಯೋಜನಾಧಿಕಾರಿ ಎನ್.ಸತೀಶ ಗೌಡ, ‘ದೇಶದ ಅಭಿವೃದ್ಧಿ ಯುವಕರಿಂದ ಸಾಧ್ಯ.ಸೈಕಲ್ ಬಳಕೆ ಆರೋಗ್ಯಕರ ಸಮಾಜಕ್ಕೆ ಮಹತ್ತರ ಕೊಡುಗೆಯಾಗಿದೆ’ ಎಂದರು.