‘ಮಠವು ಈ ಹಿಂದೆ ಕಾರ್ಗಿಲ್ ಯುದ್ಧ, ತಮಿಳುನಾಡಿನಲ್ಲಿ ಸಂಭವಿಸಿದ ಸುನಾಮಿ, ನೆರೆಹಾವಳಿ, ಬರಗಾಲ, ಪ್ರಕೃತಿ ವಿಕೋಪ, ಸೇರಿದಂತೆ ಹಲವು ಸಂದರ್ಭಗಳಲ್ಲಿ ಜನತೆಗೆ ಅಗತ್ಯವಾದ ವಸ್ತುಗಳನ್ನು ನೀಡುವ ಮೂಲಕ ತನ್ನ ಸಮಾಜಸೇವೆಯನ್ನು ಮಾಡಿದೆ. ಜನರ ಒಳಿತಿಗಾಗಿಯೇ ಲಾಕ್ಡೌನ್ ಜಾರಿಗೆ ತರಲಾಗಿದ್ದು, ಇದನ್ನು ಎಲ್ಲರೂ ಪಾಲಿಸಬೇಕು’ ಎಂದು ಅವರು ಮನವಿ ಮಾಡಿದ್ದಾರೆ.