<p><strong>ಬೆಂಗಳೂರು</strong>: ಕೆಎಸ್ಆರ್ಟಿಸಿ ಮಾದರಿಯಲ್ಲಿ ಬಿಎಂಟಿಸಿ ಸಿಬ್ಬಂದಿಗೂ ₹ 1 ಕೋಟಿ ಅಪಘಾತ ವಿಮೆ ಯೋಜನೆಯನ್ನು ಸರ್ಕಾರ ಸೋಮವಾರ ಜಾರಿ ಮಾಡಿದೆ. </p>.<p>ಅಪಘಾತದಲ್ಲಿ ಮೃತಪಟ್ಟ ಸಿಬ್ಬಂದಿಯ ಅವಲಂಬಿತರಿಗೆ ಅನುಕೂಲವಾಗುವಂತೆ ಇಲಾಖಾ ಗುಂಪು ವಿಮಾ ಪರಿಹಾರ ₹3 ಲಕ್ಷ ನೀಡುವ ಯೋಜನೆ 2008ರಿಂದಲೇ ಜಾರಿಯಲ್ಲಿದೆ. ಕೆನರಾ ಬ್ಯಾಂಕ್ನಲ್ಲಿ ವೇತನ ಖಾತೆ ಹೊಂದಿರುವ ಬಿಎಂಟಿಸಿ ನೌಕರರು ಮೃತಪಟ್ಟರೆ ₹30 ಲಕ್ಷ ಪರಿಹಾರ ನೀಡುವ ವಿಮಾ ಯೋಜನೆ 2022ರಲ್ಲಿ ಜಾರಿಯಾಗಿತ್ತು. </p>.<p>ಇದೀಗ ಯೂನಿಯನ್ ಬ್ಯಾಂಕ್ (ವಿಮೆ ₹65 ಲಕ್ಷ), ಎಸ್ಬಿಐ ಮತ್ತು ಕೆನರಾ ಬ್ಯಾಂಕ್ಗಳೊಂದಿಗೆ (ವಿಮೆ ತಲಾ ₹50 ಲಕ್ಷ) ಬಿಎಂಟಿಸಿ ಒಡಂಬಡಿಕೆ ಮಾಡಿಕೊಂಡಿದೆ. ನೌಕರರು ಮೃತಪಟ್ಟರೆ ಅವರ ಕುಟುಂಬಕ್ಕೆ ಒಟ್ಟು ₹1.15 ಕೋಟಿ ಪರಿಹಾರ ಸಿಗಲಿದೆ.</p>.<p>ಸೇವಾವಧಿಯಲ್ಲಿ ಅಪಘಾತ ಹೊರತುಪಡಿಸಿ ಕಾಯಿಲೆಗಳಿಂದ ಮೃತಪಟ್ಟವರಿಗೆ ನೀಡುತ್ತಿದ್ದ ವಿಮಾ ಪರಿಹಾರ ಮೊತ್ತವನ್ನು ₹3 ಲಕ್ಷದಿಂದ ₹10 ಲಕ್ಷಕ್ಕೆ ಏರಿಸಲಾಗಿದೆ ಎಂದು ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕ ರಾಮಚಂದ್ರನ್ ಆರ್. ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕೆಎಸ್ಆರ್ಟಿಸಿ ಮಾದರಿಯಲ್ಲಿ ಬಿಎಂಟಿಸಿ ಸಿಬ್ಬಂದಿಗೂ ₹ 1 ಕೋಟಿ ಅಪಘಾತ ವಿಮೆ ಯೋಜನೆಯನ್ನು ಸರ್ಕಾರ ಸೋಮವಾರ ಜಾರಿ ಮಾಡಿದೆ. </p>.<p>ಅಪಘಾತದಲ್ಲಿ ಮೃತಪಟ್ಟ ಸಿಬ್ಬಂದಿಯ ಅವಲಂಬಿತರಿಗೆ ಅನುಕೂಲವಾಗುವಂತೆ ಇಲಾಖಾ ಗುಂಪು ವಿಮಾ ಪರಿಹಾರ ₹3 ಲಕ್ಷ ನೀಡುವ ಯೋಜನೆ 2008ರಿಂದಲೇ ಜಾರಿಯಲ್ಲಿದೆ. ಕೆನರಾ ಬ್ಯಾಂಕ್ನಲ್ಲಿ ವೇತನ ಖಾತೆ ಹೊಂದಿರುವ ಬಿಎಂಟಿಸಿ ನೌಕರರು ಮೃತಪಟ್ಟರೆ ₹30 ಲಕ್ಷ ಪರಿಹಾರ ನೀಡುವ ವಿಮಾ ಯೋಜನೆ 2022ರಲ್ಲಿ ಜಾರಿಯಾಗಿತ್ತು. </p>.<p>ಇದೀಗ ಯೂನಿಯನ್ ಬ್ಯಾಂಕ್ (ವಿಮೆ ₹65 ಲಕ್ಷ), ಎಸ್ಬಿಐ ಮತ್ತು ಕೆನರಾ ಬ್ಯಾಂಕ್ಗಳೊಂದಿಗೆ (ವಿಮೆ ತಲಾ ₹50 ಲಕ್ಷ) ಬಿಎಂಟಿಸಿ ಒಡಂಬಡಿಕೆ ಮಾಡಿಕೊಂಡಿದೆ. ನೌಕರರು ಮೃತಪಟ್ಟರೆ ಅವರ ಕುಟುಂಬಕ್ಕೆ ಒಟ್ಟು ₹1.15 ಕೋಟಿ ಪರಿಹಾರ ಸಿಗಲಿದೆ.</p>.<p>ಸೇವಾವಧಿಯಲ್ಲಿ ಅಪಘಾತ ಹೊರತುಪಡಿಸಿ ಕಾಯಿಲೆಗಳಿಂದ ಮೃತಪಟ್ಟವರಿಗೆ ನೀಡುತ್ತಿದ್ದ ವಿಮಾ ಪರಿಹಾರ ಮೊತ್ತವನ್ನು ₹3 ಲಕ್ಷದಿಂದ ₹10 ಲಕ್ಷಕ್ಕೆ ಏರಿಸಲಾಗಿದೆ ಎಂದು ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕ ರಾಮಚಂದ್ರನ್ ಆರ್. ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>