ಬೆಂಗಳೂರು: ಕರ್ನಾಟಕ ರಾಜ್ಯ ಕೇಬಲ್ ಟಿವಿ ಆಪರೇಟರ್ ಅಸೋಸಿಯೇಷನ್ನ ನೂತನ ಕಚೇರಿಯನ್ನು ಕೋರಮಂಗಲದಲ್ಲಿ ಶಾಸಕ ರಾಮಲಿಂಗಾರೆಡ್ಡಿ ಬುಧವಾರ ಉದ್ಘಾಟಿಸಿದರು.
ಸಂಘದ ಸದಸ್ಯತ್ವವನ್ನು ಪಡೆದಿರುವ ರಾಜ್ಯದ ಯಾವುದೇ ಭಾಗದ ಕೇಬಲ್ ಆಪರೇಟರ್ಗಳು ಆಕಸ್ಮಿಕವಾಗಿ ಕಾರ್ಯನಿರತರಾಗಿದ್ದ ಸಂದರ್ಭದಲ್ಲಿ ಮರಣ ಹೊಂದಿದರೆ ಅವರ ಕುಟುಂಬಕ್ಕೆ ₹1 ಲಕ್ಷ ಪರಿಹಾರ ನೀಡಲಾಗುವುದು ಎಂದು ರಾಜ್ಯ ಘಟಕದ ಅಧ್ಯಕ್ಷ ವಿ.ಎಸ್. ಪ್ಯಾಟ್ರಿಕ್ ರಾಜು ಈ ಸಂದರ್ಭದಲ್ಲಿ ಘೋಷಿಸಿದರು.
ಮುಂದಿನ ದಿನಗಳಲ್ಲಿ ಗ್ರಾಮೀಣ ಭಾಗಗಳ ಕೇಬಲ್ ಆಪರೇಟರ್ಗಳಿಗೆ ಆಧುನಿಕ ತಂತ್ರಜ್ಞಾನಗಳ ಬಗ್ಗೆ ಮಾಹಿತಿಗಳನ್ನು ಒದಗಿಸಲು ಸಂಪರ್ಕ ಸಭೆಗಳನ್ನು ಮಾಡಲು ತೀರ್ಮಾನಿಸಲಾಗಿದೆ ಎಂದು ಅವರು ತಿಳಿಸಿದರು.