ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಬಲ್‌ ಆಪರೇಟರ್‌ಗಳಿಗೆ ₹1 ಲಕ್ಷ ಪರಿಹಾರ ನಿಧಿ: ರಾಮಲಿಂಗಾರೆಡ್ಡಿ

Last Updated 25 ಮಾರ್ಚ್ 2021, 3:10 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ರಾಜ್ಯ ಕೇಬಲ್ ಟಿವಿ ಆಪರೇಟರ್ ಅಸೋಸಿಯೇಷನ್‌ನ ನೂತನ ಕಚೇರಿಯನ್ನು ಕೋರಮಂಗಲದಲ್ಲಿ ಶಾಸಕ ರಾಮಲಿಂಗಾರೆಡ್ಡಿ ಬುಧವಾರ ಉದ್ಘಾಟಿಸಿದರು.

ಸಂಘದ ಸದಸ್ಯತ್ವವನ್ನು ಪಡೆದಿರುವ ರಾಜ್ಯದ ಯಾವುದೇ ಭಾಗದ ಕೇಬಲ್ ಆಪರೇಟರ್‌ಗಳು ಆಕಸ್ಮಿಕವಾಗಿ ಕಾರ್ಯನಿರತರಾಗಿದ್ದ ಸಂದರ್ಭದಲ್ಲಿ ಮರಣ ಹೊಂದಿದರೆ ಅವರ ಕುಟುಂಬಕ್ಕೆ ₹1 ಲಕ್ಷ ಪರಿಹಾರ ನೀಡಲಾಗುವುದು ಎಂದು ರಾಜ್ಯ ಘಟಕದ ಅಧ್ಯಕ್ಷ ವಿ.ಎಸ್‌. ಪ್ಯಾಟ್ರಿಕ್‌ ರಾಜು ಈ ಸಂದರ್ಭದಲ್ಲಿ ಘೋಷಿಸಿದರು.

ಮುಂದಿನ ದಿನಗಳಲ್ಲಿ ಗ್ರಾಮೀಣ ಭಾಗಗಳ ಕೇಬಲ್ ಆಪರೇಟರ್‌ಗಳಿಗೆ ಆಧುನಿಕ ತಂತ್ರಜ್ಞಾನಗಳ ಬಗ್ಗೆ ಮಾಹಿತಿಗಳನ್ನು ಒದಗಿಸಲು ಸಂಪರ್ಕ ಸಭೆಗಳನ್ನು ಮಾಡಲು ತೀರ್ಮಾನಿಸಲಾಗಿದೆ ಎಂದು ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT