ಇಲ್ಲೇ ಉಳಿದಿರುವ ನಿರ್ಮಾಣ ಕಾಮಗಾರಿಗಳ ಕಾರ್ಮಿಕರಿಗೆ ಎಲ್ಲ ರೀತಿಯ ವ್ಯವಸ್ಥೆಗಳನ್ನು ಮಾಡಿಕೊಡಲಾಗಿದೆ. ಇವರಿಗೆ ಕಳೆದ ಒಂದೂವರೆ ತಿಂಗಳಿಂದ ಸಂಬಳ ಮತ್ತು ಊಟದ ವ್ಯವಸ್ಥೆ ಮಾಡಿರುವುದಾಗಿ ಉದ್ಯಮಿಗಳು ಹೇಳಿದ್ದಾರೆ. ರಾಜ್ಯದಲ್ಲಿ ಎಲ್ಲ ರೀತಿಯ ಉದ್ಯಮಗಳು ಆರಂಭವಾಗಬೇಕು. ಕಾರ್ಮಿಕರು ಮತ್ತು ನಿರುದ್ಯೋಗಿಗಳಿಗೆ ಉದ್ಯೋಗ ಸಿಗುವಂತಾಗಬೇಕು ಎಂದು ಹೇಳಿದರು.