‘ಖಾಸಗಿ ವ್ಯಕ್ತಿಯೊಬ್ಬರು ಈ ಜಾಗವನ್ನು ಅನೇಕ ವರ್ಷಗಳಿಂದ ಒತ್ತುವರಿ ಮಾಡಿಕೊಂಡು ಮಾರ್ಬಲ್ ಅಂಗಡಿಗಳನ್ನು ನಡೆಸಲು ಬಾಡಿಗೆಗೆ ನೀಡಿದ್ದಾರೆ. ಒತ್ತುವರಿ ಆಗಿರುವ ವಿಚಾರ ಅಧಿಕಾರಿಗಳಿಗೆ ಗೊತ್ತಿರದೇ ಇರಲಿಕ್ಕಿಲ್ಲ. ಇಷ್ಟು ದಿನ ಏಕೆ ಗಮನಿಸಲಿಲ್ಲ ಎಂಬುದು ಅಚ್ಚರಿಯ ವಿಷಯ. ಜಾಗ ಒತ್ತುವರಿಯಲ್ಲಿ ಅಧಿಕಾರಿಗಳು ಶಾಮೀಲಾಗಿದ್ದರೆ ತನಿಖೆ ನಡೆಸಿ ಅಂತಹವರ ವಿರುದ್ಧವೂ ಶಿಸ್ತು ಕ್ರಮ ಕೈಗೊಳ್ಳುವಂತೆ ವಿಶೇಷ ಆಯುಕ್ತ (ಆಸ್ತಿ) ಜಿ.ಮಂಜುನಾಥ್ ಅವರಿಗೆ ಸೂಚನೆ ನೀಡಿದ್ದೇನೆ’ ಎಂದು ಮೇಯರ್ ತಿಳಿಸಿದರು.