ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಠ್ಯಪುಸ್ತಕ ಲೋಪ ಸರಿಪಡಿಸಲು ಒಕ್ಕಲಿಗರ ಸಂಘದಿಂದ 10 ದಿನಗಳ ಗಡುವು

Last Updated 25 ಜೂನ್ 2022, 19:54 IST
ಅಕ್ಷರ ಗಾತ್ರ

ಬೆಂಗಳೂರು: ಪಠ್ಯಪುಸ್ತಕ ಪರಿಷ್ಕರಣೆಯಲ್ಲಿ ಆಗಿರುವ ಲೋಪದೋಷಗಳನ್ನು ಸರಿಪಡಿಸದಿದ್ದರೆ ಮತ್ತೆ ಮಠಾಧೀಶರು, ದಲಿತಹಾಗೂ ಹಿಂದುಳಿದ ಸಮುದಾಯದ ಸಂಘಟನೆಗಳ ಸಭೆ ನಡೆಸಿ ಮುಂದಿನ ಹೋರಾಟದ ಕುರಿತು ತೀರ್ಮಾನಿಸಲಾಗುವುದು ಎಂದು ರಾಜ್ಯ ಒಕ್ಕಲಿಗರ ಸಂಘದ ಪ್ರಧಾನ ಕಾರ್ಯದರ್ಶಿ ಟಿ.ಕೋನಪ್ಪರೆಡ್ಡಿ ಎಚ್ಚರಿಸಿದರು.

‘ಫ್ರೀಡಂ ಪಾರ್ಕ್‌ನಲ್ಲಿ ನಡೆದಿದ್ದ ಪ್ರತಿಭಟನೆಯಲ್ಲಿ ಸರ್ಕಾರಕ್ಕೆ 10 ದಿನಗಳ ಗಡುವು ನೀಡಲಾಗಿತ್ತು. ಈ ಅವಧಿ ಒಳಗೆ ಪಠ್ಯ ಸರಿಪಡಿಸಬೇಕು’ ಎಂದು ಪತ್ರಿಕಾ ಗೋಷ್ಠಿಯಲ್ಲಿ ಶನಿವಾರ ಆಗ್ರಹಿಸಿದರು.

‘ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಪತ್ರ ಬರೆದು ಬರಗೂರು ರಾಮಚಂದ್ರಪ್ಪ ಅವರ ನೇತೃತ್ವದ ಸಮಿತಿಯ ಪಠ್ಯ ಮುಂದುವರಿಸುವಂತೆ ಮನವಿ ಮಾಡಿದ್ದಾರೆ. ಹೀಗಾಗಿ, ಸರ್ಕಾರದ ತೀರ್ಮಾನವನ್ನು ಎದುರು ನೋಡುತ್ತಿದ್ದೇವೆ. ಸರ್ಕಾರವು ಸ್ಪಂದಿಸದಿದ್ದರೆ ಮತ್ತೊಂದು ಸುತ್ತಿನ ಹೋರಾಟದ ಬಗ್ಗೆ ನಿರ್ಧರಿಸುತ್ತೇವೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT