<p><strong>ಬೆಂಗಳೂರು: </strong>ರಾಜ್ಯ ಅಪರಾಧ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಎಂ. ಅಬ್ದುಲ್ ಸಲೀಂ ಸೇರಿದಂತೆ 10 ಐಪಿಎಸ್ ಅಧಿಕಾರಿಗಳನ್ನು ಸೋಮವಾರ ವರ್ಗಾವಣೆ ಮಾಡಿರುವ ಸರ್ಕಾರ, ಪೊಲೀಸ್ ಇಲಾಖೆಯಲ್ಲಿ ಭಾರಿ ಬದಲಾವಣೆ ಮಾಡಿದೆ.</p>.<p>ಪೊಲೀಸ್ ಆಡಳಿತ ವಿಭಾಗದ ಎಡಿಜಿಪಿ ಆಗಿದ್ದ ಎ. ಪರಶಿವಮೂರ್ತಿ ಅವರನ್ನು ಬೆಂಗಳೂರು ಸಿಸಿಬಿಯ ಹೆಚ್ಚುವರಿ ಪೊಲೀಸ್ ಕಮಿಷನರ್ ಆಗಿ ನೇಮಿಸಲಾಗಿದೆ.</p>.<p>ಸಿಸಿಬಿ ಡಿಸಿಪಿ ಎಸ್. ಗಿರೀಶ್ ಅವರನ್ನು ಕೆಎಸ್ಆರ್ಪಿ 9ನೇ ಬೆಟಾಲಿಯನ್ನ ಕಮಾಂಡೆಂಟ್ ಆಗಿ ವರ್ಗಾಯಿಸಲಾಗಿದೆ. ಅವರ ಜಾಗಕ್ಕೆ ಕುಲದೀಪ್ಕುಮಾರ್ ಜೈನ್ ಅವರನ್ನು ನೇಮಕ ಮಾಡಲಾಗಿದೆ.</p>.<p>ಪೊಲೀಸ್ ಪಡೆ ಮುಖ್ಯಸ್ಥರಾಗಿ ಮೊನ್ನೆಯಷ್ಟೇ ವರ್ಗಾವಣೆಯಾಗಿದ್ದ ಬಿ.ಆರ್. ರವಿಕಾಂತೇಗೌಡ ಅವರನ್ನು ಬೆಂಗಳೂರು ಸಂಚಾರ ವಿಭಾಗದ ಹೆಚ್ಚುವರಿ ಪೊಲೀಸ್ ಕಮಿಷನರ್ ಆಗಿ ನೇಮಿಸಲಾಗಿದೆ. ಈ ಸ್ಥಾನದಲ್ಲಿದ್ದ ಪಿ.ಹರಿಶೇಖರನ್ ಅವರನ್ನು ಕೆಎಸ್ಆರ್ಪಿ ಐಜಿಪಿ ಆಗಿ ವರ್ಗಾಯಿಸಲಾಗಿದೆ.</p>.<p class="Subhead">ವರ್ಗಾವಣೆಯಾದವರು: ಎಂ.ಅಬ್ದುಲ್ ಸಲೀಂ– ಎಡಿಜಿಪಿ (ಆಡಳಿತ), ಪಿ.ಎಸ್. ಹರ್ಷ– ಮಂಗಳೂರು ಕಮಿಷನರ್, ರವಿ ಚನ್ನಣ್ಣನವರ – ಬೆಂಗಳೂರು ಗ್ರಾಮಾಂತರ ಎಸ್ಪಿ, ಬಿ.ದಯಾನಂದ್– ಐಜಿಪಿ (ಸಿಐಡಿ), ಅರುಣಾಗುಸ್ ಗಿರಿ (ಡಿಸಿಪಿ) ಮಂಗಳೂರು ನಗರ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ರಾಜ್ಯ ಅಪರಾಧ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಎಂ. ಅಬ್ದುಲ್ ಸಲೀಂ ಸೇರಿದಂತೆ 10 ಐಪಿಎಸ್ ಅಧಿಕಾರಿಗಳನ್ನು ಸೋಮವಾರ ವರ್ಗಾವಣೆ ಮಾಡಿರುವ ಸರ್ಕಾರ, ಪೊಲೀಸ್ ಇಲಾಖೆಯಲ್ಲಿ ಭಾರಿ ಬದಲಾವಣೆ ಮಾಡಿದೆ.</p>.<p>ಪೊಲೀಸ್ ಆಡಳಿತ ವಿಭಾಗದ ಎಡಿಜಿಪಿ ಆಗಿದ್ದ ಎ. ಪರಶಿವಮೂರ್ತಿ ಅವರನ್ನು ಬೆಂಗಳೂರು ಸಿಸಿಬಿಯ ಹೆಚ್ಚುವರಿ ಪೊಲೀಸ್ ಕಮಿಷನರ್ ಆಗಿ ನೇಮಿಸಲಾಗಿದೆ.</p>.<p>ಸಿಸಿಬಿ ಡಿಸಿಪಿ ಎಸ್. ಗಿರೀಶ್ ಅವರನ್ನು ಕೆಎಸ್ಆರ್ಪಿ 9ನೇ ಬೆಟಾಲಿಯನ್ನ ಕಮಾಂಡೆಂಟ್ ಆಗಿ ವರ್ಗಾಯಿಸಲಾಗಿದೆ. ಅವರ ಜಾಗಕ್ಕೆ ಕುಲದೀಪ್ಕುಮಾರ್ ಜೈನ್ ಅವರನ್ನು ನೇಮಕ ಮಾಡಲಾಗಿದೆ.</p>.<p>ಪೊಲೀಸ್ ಪಡೆ ಮುಖ್ಯಸ್ಥರಾಗಿ ಮೊನ್ನೆಯಷ್ಟೇ ವರ್ಗಾವಣೆಯಾಗಿದ್ದ ಬಿ.ಆರ್. ರವಿಕಾಂತೇಗೌಡ ಅವರನ್ನು ಬೆಂಗಳೂರು ಸಂಚಾರ ವಿಭಾಗದ ಹೆಚ್ಚುವರಿ ಪೊಲೀಸ್ ಕಮಿಷನರ್ ಆಗಿ ನೇಮಿಸಲಾಗಿದೆ. ಈ ಸ್ಥಾನದಲ್ಲಿದ್ದ ಪಿ.ಹರಿಶೇಖರನ್ ಅವರನ್ನು ಕೆಎಸ್ಆರ್ಪಿ ಐಜಿಪಿ ಆಗಿ ವರ್ಗಾಯಿಸಲಾಗಿದೆ.</p>.<p class="Subhead">ವರ್ಗಾವಣೆಯಾದವರು: ಎಂ.ಅಬ್ದುಲ್ ಸಲೀಂ– ಎಡಿಜಿಪಿ (ಆಡಳಿತ), ಪಿ.ಎಸ್. ಹರ್ಷ– ಮಂಗಳೂರು ಕಮಿಷನರ್, ರವಿ ಚನ್ನಣ್ಣನವರ – ಬೆಂಗಳೂರು ಗ್ರಾಮಾಂತರ ಎಸ್ಪಿ, ಬಿ.ದಯಾನಂದ್– ಐಜಿಪಿ (ಸಿಐಡಿ), ಅರುಣಾಗುಸ್ ಗಿರಿ (ಡಿಸಿಪಿ) ಮಂಗಳೂರು ನಗರ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>