<p><strong>ಬೆಂಗಳೂರು: </strong>ನೂರಾರು ಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ಬಂಧಿಸಲಾಗಿರುವ ಯುವರಾಜ್ ಅಲಿಯಾಸ್ ಸೇವಾಲಾಲ್ ಸ್ವಾಮೀಜಿ, ಕನ್ನಡ ಸಿನಿಮಾ ನಿರ್ಮಾಪಕರೊಬ್ಬರಿಂದ ₹ 10 ಲಕ್ಷ ಪಡೆದು ವಂಚಿಸಿರುವ ಸಂಗತಿ ಹೊರಬಿದ್ದಿದೆ. ಉಪ್ಪಾರಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆ ಬಗ್ಗೆ ಸಿಸಿಬಿ ಮಾಹಿತಿ ಕಲೆಹಾಕುತ್ತಿದೆ.</p>.<p>‘ಬಿಜೆಪಿ ಹಾಗೂ ಆರ್ಎಸ್ಎಸ್ ಮುಖಂಡರು ತನಗೆ ಪರಿಚಿತರು ಎಂದು ಹೇಳಿಕೊಳ್ಳುತ್ತಿದ್ದ ಯುವರಾಜ್, ಸರ್ಕಾರಿ ಕೆಲಸ ಹಾಗೂ ಕಾಮಗಾರಿಗಳ ಗುತ್ತಿಗೆ ಕೊಡಿಸುವ ಆಮಿಷವೊಡ್ಡಿ ಅನೇಕರಿಂದ ಕೋಟ್ಯಂತರ ರೂಪಾಯಿ ಪಡೆದು ವಂಚಿಸಿದ್ದಾರೆ. ಈ ಬಗ್ಗೆ ಹಲವು ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿದ್ದು, ಅವುಗಳ ಮಾಹಿತಿ ಕಲೆ ಹಾಕಲಾಗುತ್ತಿದೆ’ ಎಂದು ಸಿಸಿಬಿ ಮೂಲಗಳು ತಿಳಿಸಿವೆ.</p>.<p>‘ನಿರ್ಮಾಪಕ ಸಹದೇವ್ ಎಂಬುವರು 2000ರಲ್ಲಿ ಯುವರಾಜ್ ಅವರನ್ನು ಭೇಟಿಯಾಗಿದ್ದರು. ಸಿನಿಮಾ ಮಾಡುವ ಬಯಕೆಯನ್ನು ಸಹದೇವ್ ವ್ಯಕ್ತಪಡಿಸಿದ್ದರು. ‘ಸಿನಿಮಾ ನಿರ್ಮಾಣದಲ್ಲಿ ಹೂಡಿಕೆ ಮಾಡುವವರು ನನಗೆ ಪರಿಚಯ. ಅವರಿಂದ ₹ 70 ಲಕ್ಷ ಕೊಡಿಸು<br />ತ್ತೇನೆ. ಅದಕ್ಕೂ ಮುನ್ನ ನನಗೆ ₹ 10 ಲಕ್ಷ ನೀಡಬೇಕು’ ಎಂದು ಯುವರಾಜ್ ಹೇಳಿದ್ದರು.’</p>.<p>‘ಅದನ್ನು ನಂಬಿದ್ದ ಸಹದೇವ್, ಆರೋಪಿಗೆ ₹ 10 ಲಕ್ಷ ಕೊಟ್ಟಿದ್ದರು. ಹಣ ಪಡೆದಿದ್ದ ಆರೋಪಿ ಬಳಿಕ ತಲೆಮರೆಸಿಕೊಂಡಿದ್ದರು. ನೊಂದ ನಿರ್ಮಾಪಕ, ಉಪ್ಪಾರಪೇಟೆ ಠಾಣೆಗೆ ದೂರು ನೀಡಿದ್ದರು’ ಎಂದೂ ಮೂಲಗಳು ಹೇಳಿವೆ.</p>.<p class="Subhead"><strong>ಸಚಿವರ ಜೊತೆ ಯುವರಾಜ್ ಫೋಟೊ: </strong>ಸಚಿವರಾದ ಲಕ್ಷ್ಮಣ ಸವದಿ, ವಿ. ಸೋಮಣ್ಣ, ಪರಿಷತ್ನ ಬಿಜೆಪಿ ಸದಸ್ಯ ಸಿ.ಪಿ. ಯೋಗೇಶ್ವರ್ ಸೇರಿದಂತೆ ಹಲವರ ಜೊತೆಯಲ್ಲಿ ಯುವರಾಜ್ ಫೋಟೊ ತೆಗೆಸಿಕೊಂಡಿದ್ದು, ಅವುಗಳೆಲ್ಲವೂ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.</p>.<p>ಯುವರಾಜ್ ತಮ್ಮ ಜೊತೆ ಕಾಣಿಸಿಕೊಂಡ ಫೋಟೊ ಕುರಿತು ಪ್ರತಿಕ್ರಿಯಿಸಿರುವ ವಿ. ಸೋಮಣ್ಣ, ‘ಆತನಿಗೂ ನನಗೂ ಯಾವುದೇ ವೈಯಕ್ತಿಕ ಸಂಬಂಧವಿಲ್ಲ’ ಎಂದಿದ್ದಾರೆ.</p>.<p>‘ಬಿಜೆಪಿ ಕಾರ್ಯಕರ್ತನೆಂದು ಆತ ಗುರುತಿಸಿಕೊಂಡಿದ್ದ. ನನ್ನನ್ನು ಒತ್ತಾಯದಿಂದ ಮನೆಗೆ ಕರೆದೊಯ್ದಿದ್ದ. ಮನಸ್ಸು ನೋಯಿಸಬಾರದೆಂದು ನಾನು ಹೋಗಿದ್ದೆ. ಅಲ್ಲಿಯೇ ತಿಂಡಿ ತಿಂದಿದ್ದೆ. ಆತನ ಐಷಾರಾಮಿ ಮನೆ ಹಾಗೂ ಆತ ಕೊಟ್ಟ ತಟ್ಟೆ ನೋಡಿಯೇ ದಿಗಿಲಾಗಿತ್ತು. ನಂತರ, ಆತನ ಮನೆಗೆ ಹೋಗಿಲ್ಲ’ ಎಂದೂ ಹೇಳಿದರು.</p>.<p class="Briefhead"><strong>ಅಕ್ರಮ ಹಣ ವರ್ಗಾವಣೆ; ಇ.ಡಿ, ಐ.ಟಿ.ಗೆ ಮಾಹಿತಿ</strong></p>.<p>‘ಯುವರಾಜ್ ಅವರು ಅಕ್ರಮವಾಗಿ ಹಣ ವರ್ಗಾವಣೆ ಮಾಡಿರುವುದು ತನಿಖೆಯಿಂದ ಗೊತ್ತಾಗಿದೆ. ಈ ಬಗ್ಗೆ ಜಾರಿ ನಿರ್ದೇಶನಾಲಯ ಹಾಗೂ ಆದಾಯ ತೆರಿಗೆ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ’ ಎಂದು ಸಿಸಿಬಿ ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ನೂರಾರು ಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ಬಂಧಿಸಲಾಗಿರುವ ಯುವರಾಜ್ ಅಲಿಯಾಸ್ ಸೇವಾಲಾಲ್ ಸ್ವಾಮೀಜಿ, ಕನ್ನಡ ಸಿನಿಮಾ ನಿರ್ಮಾಪಕರೊಬ್ಬರಿಂದ ₹ 10 ಲಕ್ಷ ಪಡೆದು ವಂಚಿಸಿರುವ ಸಂಗತಿ ಹೊರಬಿದ್ದಿದೆ. ಉಪ್ಪಾರಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆ ಬಗ್ಗೆ ಸಿಸಿಬಿ ಮಾಹಿತಿ ಕಲೆಹಾಕುತ್ತಿದೆ.</p>.<p>‘ಬಿಜೆಪಿ ಹಾಗೂ ಆರ್ಎಸ್ಎಸ್ ಮುಖಂಡರು ತನಗೆ ಪರಿಚಿತರು ಎಂದು ಹೇಳಿಕೊಳ್ಳುತ್ತಿದ್ದ ಯುವರಾಜ್, ಸರ್ಕಾರಿ ಕೆಲಸ ಹಾಗೂ ಕಾಮಗಾರಿಗಳ ಗುತ್ತಿಗೆ ಕೊಡಿಸುವ ಆಮಿಷವೊಡ್ಡಿ ಅನೇಕರಿಂದ ಕೋಟ್ಯಂತರ ರೂಪಾಯಿ ಪಡೆದು ವಂಚಿಸಿದ್ದಾರೆ. ಈ ಬಗ್ಗೆ ಹಲವು ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿದ್ದು, ಅವುಗಳ ಮಾಹಿತಿ ಕಲೆ ಹಾಕಲಾಗುತ್ತಿದೆ’ ಎಂದು ಸಿಸಿಬಿ ಮೂಲಗಳು ತಿಳಿಸಿವೆ.</p>.<p>‘ನಿರ್ಮಾಪಕ ಸಹದೇವ್ ಎಂಬುವರು 2000ರಲ್ಲಿ ಯುವರಾಜ್ ಅವರನ್ನು ಭೇಟಿಯಾಗಿದ್ದರು. ಸಿನಿಮಾ ಮಾಡುವ ಬಯಕೆಯನ್ನು ಸಹದೇವ್ ವ್ಯಕ್ತಪಡಿಸಿದ್ದರು. ‘ಸಿನಿಮಾ ನಿರ್ಮಾಣದಲ್ಲಿ ಹೂಡಿಕೆ ಮಾಡುವವರು ನನಗೆ ಪರಿಚಯ. ಅವರಿಂದ ₹ 70 ಲಕ್ಷ ಕೊಡಿಸು<br />ತ್ತೇನೆ. ಅದಕ್ಕೂ ಮುನ್ನ ನನಗೆ ₹ 10 ಲಕ್ಷ ನೀಡಬೇಕು’ ಎಂದು ಯುವರಾಜ್ ಹೇಳಿದ್ದರು.’</p>.<p>‘ಅದನ್ನು ನಂಬಿದ್ದ ಸಹದೇವ್, ಆರೋಪಿಗೆ ₹ 10 ಲಕ್ಷ ಕೊಟ್ಟಿದ್ದರು. ಹಣ ಪಡೆದಿದ್ದ ಆರೋಪಿ ಬಳಿಕ ತಲೆಮರೆಸಿಕೊಂಡಿದ್ದರು. ನೊಂದ ನಿರ್ಮಾಪಕ, ಉಪ್ಪಾರಪೇಟೆ ಠಾಣೆಗೆ ದೂರು ನೀಡಿದ್ದರು’ ಎಂದೂ ಮೂಲಗಳು ಹೇಳಿವೆ.</p>.<p class="Subhead"><strong>ಸಚಿವರ ಜೊತೆ ಯುವರಾಜ್ ಫೋಟೊ: </strong>ಸಚಿವರಾದ ಲಕ್ಷ್ಮಣ ಸವದಿ, ವಿ. ಸೋಮಣ್ಣ, ಪರಿಷತ್ನ ಬಿಜೆಪಿ ಸದಸ್ಯ ಸಿ.ಪಿ. ಯೋಗೇಶ್ವರ್ ಸೇರಿದಂತೆ ಹಲವರ ಜೊತೆಯಲ್ಲಿ ಯುವರಾಜ್ ಫೋಟೊ ತೆಗೆಸಿಕೊಂಡಿದ್ದು, ಅವುಗಳೆಲ್ಲವೂ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.</p>.<p>ಯುವರಾಜ್ ತಮ್ಮ ಜೊತೆ ಕಾಣಿಸಿಕೊಂಡ ಫೋಟೊ ಕುರಿತು ಪ್ರತಿಕ್ರಿಯಿಸಿರುವ ವಿ. ಸೋಮಣ್ಣ, ‘ಆತನಿಗೂ ನನಗೂ ಯಾವುದೇ ವೈಯಕ್ತಿಕ ಸಂಬಂಧವಿಲ್ಲ’ ಎಂದಿದ್ದಾರೆ.</p>.<p>‘ಬಿಜೆಪಿ ಕಾರ್ಯಕರ್ತನೆಂದು ಆತ ಗುರುತಿಸಿಕೊಂಡಿದ್ದ. ನನ್ನನ್ನು ಒತ್ತಾಯದಿಂದ ಮನೆಗೆ ಕರೆದೊಯ್ದಿದ್ದ. ಮನಸ್ಸು ನೋಯಿಸಬಾರದೆಂದು ನಾನು ಹೋಗಿದ್ದೆ. ಅಲ್ಲಿಯೇ ತಿಂಡಿ ತಿಂದಿದ್ದೆ. ಆತನ ಐಷಾರಾಮಿ ಮನೆ ಹಾಗೂ ಆತ ಕೊಟ್ಟ ತಟ್ಟೆ ನೋಡಿಯೇ ದಿಗಿಲಾಗಿತ್ತು. ನಂತರ, ಆತನ ಮನೆಗೆ ಹೋಗಿಲ್ಲ’ ಎಂದೂ ಹೇಳಿದರು.</p>.<p class="Briefhead"><strong>ಅಕ್ರಮ ಹಣ ವರ್ಗಾವಣೆ; ಇ.ಡಿ, ಐ.ಟಿ.ಗೆ ಮಾಹಿತಿ</strong></p>.<p>‘ಯುವರಾಜ್ ಅವರು ಅಕ್ರಮವಾಗಿ ಹಣ ವರ್ಗಾವಣೆ ಮಾಡಿರುವುದು ತನಿಖೆಯಿಂದ ಗೊತ್ತಾಗಿದೆ. ಈ ಬಗ್ಗೆ ಜಾರಿ ನಿರ್ದೇಶನಾಲಯ ಹಾಗೂ ಆದಾಯ ತೆರಿಗೆ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ’ ಎಂದು ಸಿಸಿಬಿ ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>