ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಚ್.ವಿ. ರಾಜೀವ್ ಮಾತನಾಡಿ, ‘ಆರ್ಥಿಕವಾಗಿ ಹಿಂದುಳಿದಿರುವ ರಾಜ್ಯದ ಎಲ್ಲ ಸಾಮಾನ್ಯ ನಾಗರಿಕರು ಶಿಕ್ಷಣ, ಉದ್ಯೋಗಗಳಲ್ಲಿ ಕೇಂದ್ರದ ಮಾದರಿಯಲ್ಲೇ ಮೀಸಲಾತಿಯ ಸೌಲಭ್ಯವನ್ನು ಪಡೆಯುವಂತಾಗಬೇಕು. ಹಲವು ರಾಜ್ಯಗಳಲ್ಲಿ ಈಗಾಗಲೇ ಶೇ 10 ರಷ್ಟು ಮೀಸಲಾತಿ ಅನುಷ್ಠಾನವಾಗದೆ. ಆದರೆ, ಇಲ್ಲಿ ರಾಜ್ಯ ಸರ್ಕಾರವು ಅನುಷ್ಠಾನ ಮಾಡದ ಪರಿಣಾಮ ಆರ್ಥಿಕವಾಗಿ ಹಿಂದುಳಿದ ಕುಟುಂಬದ ಮಕ್ಕಳಿಗೆ ಸಿಗಬೇಕಾದ ಅವಕಾಶಗಳು ಕೈತಪ್ಪಿವೆ. ಹಾಗಾಗಿ, ಬ್ರಾಹ್ಮಣ ಮಹಾಸಭೆಯು ಇದರನಾಯಕತ್ವವನ್ನು ವಹಿಸಿಕೊಂಡು, ಸರ್ಕಾರದ ಗಮನ ಸೆಳೆಯಬೇಕು’ ಎಂದು ಆಗ್ರಹಿಸಿದರು.