<p><strong>ಯಲಹಂಕ: </strong>ಯಲಹಂಕ ವಲಯ ವ್ಯಾಪ್ತಿಯಲ್ಲಿ ಹತ್ತು ಸಾವಿರ ಸಸಿಗಳನ್ನು ನೆಡುವ ಗುರಿ ಇದೆ ಎಂದು ಶಾಸಕ ಎಸ್.ಆರ್. ವಿಶ್ವನಾಥ್ ಹೇಳಿದರು.<br /> <br /> ವಿಶ್ವ ಪರಿಸರ ದಿನದ ಅಂಗವಾಗಿ ಪುಟ್ಟೇನಹಳ್ಳಿಯ ಕೆಎಚ್ಬಿ ಕಾಲೋನಿ ಉದ್ಯಾನದಲ್ಲಿ ಬಿಬಿಎಂಪಿ ಸದಸ್ಯರ ಹಾಗೂ ಅಧಿಕಾರಿಗಳ ಶ್ರಮದಾನದ ಮೂಲಕ ಹಮ್ಮಿಕೊಂಡಿದ್ದ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, `ಈ ಭಾಗದಲ್ಲಿ ಸಾಂಕೇತಿಕವಾಗಿ ವಿವಿಧ ಜಾತಿಯ 2 ಸಾವಿರ ಸಸಿಗಳನ್ನು ನೆಡಲಾಗುತ್ತಿದೆ~ ಎಂದರು.<br /> <br /> `ಯಲಹಂಕದ 56 ಉದ್ಯಾನಗಳ ಪೈಕಿ 52ರಲ್ಲಿ ಈಗಾಗಲೇ ಹೊಂಗೆ, ಬೇವು, ಹಲಸು ಸೇರಿದಂತೆ ಔಷಧಿಯುಕ್ತ ಸಸಿಗಳನ್ನು ಬೆಳೆಸಲಾಗಿದೆ. ಮುಂದಿನ 5 ವರ್ಷಗಳಲ್ಲಿ 60 ಕಿರು ಅರಣ್ಯಗಳನ್ನು ಬೆಳೆಸಲು ಉದ್ದೇಶಿಸಲಾಗಿದೆ~ ಎಂದರು.<br /> <br /> ಬಿಬಿಎಂಪಿ ಯಲಹಂಕ ವಲಯದ ಜಂಟಿ ಆಯುಕ್ತ ರಬೀಂದ್ರ, ಪಾಲಿಕೆ ಸದಸ್ಯೆ ಕೆ.ವಿ.ಯಶೋಧಾ ರವಿಶಂಕರ್, ವಲಯ ಅರಣ್ಯಾಧಿಕಾರಿ ಆರ್. ಸುರೇಶ್, ತೋಟಗಾರಿಕೆ ಇಲಾಖೆ ಅಧೀಕ್ಷಕ ಮಹಮದ್ ಆಲಿ, ಕಾರ್ಯನಿರ್ವಾಹಕ ಎಂಜಿನಿಯರ್ ಎ.ಜಿ.ರಂಗಯ್ಯ, ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಶ್ರೀನಿವಾಸ್ ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲಹಂಕ: </strong>ಯಲಹಂಕ ವಲಯ ವ್ಯಾಪ್ತಿಯಲ್ಲಿ ಹತ್ತು ಸಾವಿರ ಸಸಿಗಳನ್ನು ನೆಡುವ ಗುರಿ ಇದೆ ಎಂದು ಶಾಸಕ ಎಸ್.ಆರ್. ವಿಶ್ವನಾಥ್ ಹೇಳಿದರು.<br /> <br /> ವಿಶ್ವ ಪರಿಸರ ದಿನದ ಅಂಗವಾಗಿ ಪುಟ್ಟೇನಹಳ್ಳಿಯ ಕೆಎಚ್ಬಿ ಕಾಲೋನಿ ಉದ್ಯಾನದಲ್ಲಿ ಬಿಬಿಎಂಪಿ ಸದಸ್ಯರ ಹಾಗೂ ಅಧಿಕಾರಿಗಳ ಶ್ರಮದಾನದ ಮೂಲಕ ಹಮ್ಮಿಕೊಂಡಿದ್ದ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, `ಈ ಭಾಗದಲ್ಲಿ ಸಾಂಕೇತಿಕವಾಗಿ ವಿವಿಧ ಜಾತಿಯ 2 ಸಾವಿರ ಸಸಿಗಳನ್ನು ನೆಡಲಾಗುತ್ತಿದೆ~ ಎಂದರು.<br /> <br /> `ಯಲಹಂಕದ 56 ಉದ್ಯಾನಗಳ ಪೈಕಿ 52ರಲ್ಲಿ ಈಗಾಗಲೇ ಹೊಂಗೆ, ಬೇವು, ಹಲಸು ಸೇರಿದಂತೆ ಔಷಧಿಯುಕ್ತ ಸಸಿಗಳನ್ನು ಬೆಳೆಸಲಾಗಿದೆ. ಮುಂದಿನ 5 ವರ್ಷಗಳಲ್ಲಿ 60 ಕಿರು ಅರಣ್ಯಗಳನ್ನು ಬೆಳೆಸಲು ಉದ್ದೇಶಿಸಲಾಗಿದೆ~ ಎಂದರು.<br /> <br /> ಬಿಬಿಎಂಪಿ ಯಲಹಂಕ ವಲಯದ ಜಂಟಿ ಆಯುಕ್ತ ರಬೀಂದ್ರ, ಪಾಲಿಕೆ ಸದಸ್ಯೆ ಕೆ.ವಿ.ಯಶೋಧಾ ರವಿಶಂಕರ್, ವಲಯ ಅರಣ್ಯಾಧಿಕಾರಿ ಆರ್. ಸುರೇಶ್, ತೋಟಗಾರಿಕೆ ಇಲಾಖೆ ಅಧೀಕ್ಷಕ ಮಹಮದ್ ಆಲಿ, ಕಾರ್ಯನಿರ್ವಾಹಕ ಎಂಜಿನಿಯರ್ ಎ.ಜಿ.ರಂಗಯ್ಯ, ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಶ್ರೀನಿವಾಸ್ ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>