<p><strong>ಬೆಂಗಳೂರು: </strong>ಬೋಯಿಂಗ್ ಸಂಸ್ಥೆಯು ಸೆಲ್ಕೊ ಹಾಗೂ ಡಾಕ್ಟರ್ಸ್ ಫಾರ್ ಯೂ ಸಹಯೋಗದೊಂದಿಗೆ ಯಲಹಂಕದಲ್ಲಿ ನಿರ್ಮಿಸಿರುವ100 ಹಾಸಿಗೆಗಳ ಅತ್ಯಾ ಧುನಿಕ ಕೋವಿಡ್ ಆರೈಕೆ ಕೇಂದ್ರವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಅವರು ಶನಿವಾರ ಉದ್ಘಾಟಿಸಿದರು.</p>.<p>ಈ ಕೇಂದ್ರವನ್ನು₹5.5 ಕೋಟಿ ವೆಚ್ಚದಲ್ಲಿ ಕೇವಲ20 ದಿನಗಳಲ್ಲಿ ನಿರ್ಮಿಸಲಾಗಿದೆ.</p>.<p>ಸೌರ ವಿದ್ಯುತ್ ಹಾಗೂ ತಾಪಮಾನ ನಿಯಂತ್ರಣ ವ್ಯವಸ್ಥೆ ಒಳಗೊಂಡಿರುವ ಈ ಕೇಂದ್ರದಲ್ಲಿ ಔಷಧಾಲಯ, ಪ್ರಯೋಗಾಲಯ, ವಿಶ್ರಾಂತಿ ಕೊಠಡಿ, ಶುಶ್ರೂಷಕಿ ಹಾಗೂ ತಾಯಂದಿರ ಆರೈಕೆ ಕೇಂದ್ರವೂ ಇದೆ. 10 ಐಸಿಯು ಹಾಗೂ 20 ಎಚ್ಡಿಯು ಹಾಸಿಗೆಗಳಿವೆ. ಉಳಿದ ಹಾಸಿಗೆಗಳು ವೈದ್ಯಕೀಯ ಆಮ್ಲಜನಕ ವ್ಯವಸ್ಥೆ ಹೊಂದಿವೆ.</p>.<p>ಆಸ್ಪತ್ರೆ ನಿರ್ಮಾಣಕ್ಕೆ ಕರ್ನಾಟಕ ವಿದ್ಯುತ್ ನಿಗಮವು ಅರ್ಧ ಎಕರೆ ಜಾಗ ಬಿಟ್ಟುಕೊಟ್ಟಿದೆ.</p>.<p>ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ‘ಕೋವಿಡ್ ಎರಡನೇ ಅಲೆಯ ನಿಯಂತ್ರಣ, ಚಿಕಿತ್ಸೆ ಹಾಗೂ ಲಸಿಕೆ ಕಾರ್ಯಕ್ರಮದಲ್ಲಿ ಸರ್ಕಾರದ ಜೊತೆ ಖಾಸಗಿ ಸಂಸ್ಥೆಗಳು ಕೈ ಜೋಡಿಸಿರುವುದು ಶ್ಲಾಘನೀಯ. ಬೋಯಿಂಗ್ ಸಂಸ್ಥೆ ಕಡಿಮೆ ಅವಧಿಯಲ್ಲಿ ಅತ್ಯಾಧುನಿಕ ಕೋವಿಡ್ ಆರೈಕೆ ಕೇಂದ್ರ ನಿರ್ಮಿಸಿರುವುದು ಸಂತಸದ ವಿಷಯ’ ಎಂದರು.</p>.<p>ಡಿ.ವಿ.ಸದಾನಂದ ಗೌಡ, ‘ಕೋವಿಡ್ ಸಾಂಕ್ರಾಮಿಕ ಆರಂಭವಾದಾಗಿನಿಂದಲೂ ರಾಜ್ಯ ಸರ್ಕಾರಗಳಿಗೆ ಕೇಂದ್ರವು ಎಲ್ಲ ರೀತಿಯ ಬೆಂಬಲ ನೀಡಿದ್ದು ಮುಂದೆಯೂ ಸಹಕಾರ ಮುಂದು ವರಿಯಲಿದೆ’ ಎಂದು ಹೇಳಿದರು.</p>.<p>ಬೆಂಗಳೂರು ಅಭಿವೃದ್ಧಿ ಪ್ರಾಧಿ ಕಾರದ ಅಧ್ಯಕ್ಷ ಎಸ್.ಆರ್.ವಿಶ್ವನಾಥ್, ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ರಾಜ್ಕುಮಾರ್ ಖತ್ರಿ,ಬೋಯಿಂಗ್ ಇಂಡಿಯಾ ಅಧ್ಯಕ್ಷ ಸಲೀಲ್ ಗುಪ್ತೆ, ‘ಡಾಕ್ಟರ್ಸ್ ಫಾರ್ ಯೂ’ ಸಂಸ್ಥೆಯ ಅಧ್ಯಕ್ಷ ರಜತ್ ಜೈನ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಬೋಯಿಂಗ್ ಸಂಸ್ಥೆಯು ಸೆಲ್ಕೊ ಹಾಗೂ ಡಾಕ್ಟರ್ಸ್ ಫಾರ್ ಯೂ ಸಹಯೋಗದೊಂದಿಗೆ ಯಲಹಂಕದಲ್ಲಿ ನಿರ್ಮಿಸಿರುವ100 ಹಾಸಿಗೆಗಳ ಅತ್ಯಾ ಧುನಿಕ ಕೋವಿಡ್ ಆರೈಕೆ ಕೇಂದ್ರವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಅವರು ಶನಿವಾರ ಉದ್ಘಾಟಿಸಿದರು.</p>.<p>ಈ ಕೇಂದ್ರವನ್ನು₹5.5 ಕೋಟಿ ವೆಚ್ಚದಲ್ಲಿ ಕೇವಲ20 ದಿನಗಳಲ್ಲಿ ನಿರ್ಮಿಸಲಾಗಿದೆ.</p>.<p>ಸೌರ ವಿದ್ಯುತ್ ಹಾಗೂ ತಾಪಮಾನ ನಿಯಂತ್ರಣ ವ್ಯವಸ್ಥೆ ಒಳಗೊಂಡಿರುವ ಈ ಕೇಂದ್ರದಲ್ಲಿ ಔಷಧಾಲಯ, ಪ್ರಯೋಗಾಲಯ, ವಿಶ್ರಾಂತಿ ಕೊಠಡಿ, ಶುಶ್ರೂಷಕಿ ಹಾಗೂ ತಾಯಂದಿರ ಆರೈಕೆ ಕೇಂದ್ರವೂ ಇದೆ. 10 ಐಸಿಯು ಹಾಗೂ 20 ಎಚ್ಡಿಯು ಹಾಸಿಗೆಗಳಿವೆ. ಉಳಿದ ಹಾಸಿಗೆಗಳು ವೈದ್ಯಕೀಯ ಆಮ್ಲಜನಕ ವ್ಯವಸ್ಥೆ ಹೊಂದಿವೆ.</p>.<p>ಆಸ್ಪತ್ರೆ ನಿರ್ಮಾಣಕ್ಕೆ ಕರ್ನಾಟಕ ವಿದ್ಯುತ್ ನಿಗಮವು ಅರ್ಧ ಎಕರೆ ಜಾಗ ಬಿಟ್ಟುಕೊಟ್ಟಿದೆ.</p>.<p>ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ‘ಕೋವಿಡ್ ಎರಡನೇ ಅಲೆಯ ನಿಯಂತ್ರಣ, ಚಿಕಿತ್ಸೆ ಹಾಗೂ ಲಸಿಕೆ ಕಾರ್ಯಕ್ರಮದಲ್ಲಿ ಸರ್ಕಾರದ ಜೊತೆ ಖಾಸಗಿ ಸಂಸ್ಥೆಗಳು ಕೈ ಜೋಡಿಸಿರುವುದು ಶ್ಲಾಘನೀಯ. ಬೋಯಿಂಗ್ ಸಂಸ್ಥೆ ಕಡಿಮೆ ಅವಧಿಯಲ್ಲಿ ಅತ್ಯಾಧುನಿಕ ಕೋವಿಡ್ ಆರೈಕೆ ಕೇಂದ್ರ ನಿರ್ಮಿಸಿರುವುದು ಸಂತಸದ ವಿಷಯ’ ಎಂದರು.</p>.<p>ಡಿ.ವಿ.ಸದಾನಂದ ಗೌಡ, ‘ಕೋವಿಡ್ ಸಾಂಕ್ರಾಮಿಕ ಆರಂಭವಾದಾಗಿನಿಂದಲೂ ರಾಜ್ಯ ಸರ್ಕಾರಗಳಿಗೆ ಕೇಂದ್ರವು ಎಲ್ಲ ರೀತಿಯ ಬೆಂಬಲ ನೀಡಿದ್ದು ಮುಂದೆಯೂ ಸಹಕಾರ ಮುಂದು ವರಿಯಲಿದೆ’ ಎಂದು ಹೇಳಿದರು.</p>.<p>ಬೆಂಗಳೂರು ಅಭಿವೃದ್ಧಿ ಪ್ರಾಧಿ ಕಾರದ ಅಧ್ಯಕ್ಷ ಎಸ್.ಆರ್.ವಿಶ್ವನಾಥ್, ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ರಾಜ್ಕುಮಾರ್ ಖತ್ರಿ,ಬೋಯಿಂಗ್ ಇಂಡಿಯಾ ಅಧ್ಯಕ್ಷ ಸಲೀಲ್ ಗುಪ್ತೆ, ‘ಡಾಕ್ಟರ್ಸ್ ಫಾರ್ ಯೂ’ ಸಂಸ್ಥೆಯ ಅಧ್ಯಕ್ಷ ರಜತ್ ಜೈನ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>