<p><strong>ಬೆಂಗಳೂರು:</strong> ‘ಗ್ರಾಮಗಳ ಅಭಿವೃದ್ಧಿಗಾಗಿ ರೋಟರಿ ಸಂಸ್ಥೆಗಳು ₹ 100 ಕೋಟಿ ವೆಚ್ಚದಲ್ಲಿ ಶಿಕ್ಷಣ, ಆರೋಗ್ಯ, ಕುಡಿಯುವ ನೀರಿನ ವ್ಯವಸ್ಥೆ ಮಾಡುತ್ತಿವೆ’ ಎಂದು ರೋಟರಿ ಡಿಸ್ಟ್ರಿಕ್ಟ್ 3192ರ ಗವರ್ನರ್ ಎನ್.ಎಸ್. ಮಹದೇವ ಪ್ರಸಾದ್ ತಿಳಿಸಿದರು.</p>.<p>2024-2025 ನೇ ಸಾಲಿನ ಗವರ್ನರ್ ಆಗಿ ಪ್ರಮಾಣ ವಚನ ಸ್ವೀಕರಿಸಿ ಅವರು ಮಾತನಾಡಿದರು.</p>.<p>ಜನರಿಗೆ, ವನ್ಯಜೀವಿಗಳಿಗೆ ಬೇಸಿಗೆಯಲ್ಲಿ ಜಲಚೇತನ ಯೋಜನೆಯಡಿ ಕುಡಿಯುವ ನೀರಿನ ವ್ಯವಸ್ಥೆ, 9–14 ವರ್ಷ ವಯಸ್ಸಿನ ಮಕ್ಕಳಿಗೆ ರೋಗನಿರೋಧಕ ಚುಚ್ಚುಮದ್ದು ನೀಡುವುದು ಸೇರಿ ಹಲವು ಯೋಜನೆಗಳನ್ನು ರೂಪಿಸಲಾಗಿದೆ ಎಂದು ವಿವರಿಸಿದರು.</p>.<p>‘ರೋಟರಿ ಸಂಸ್ಥೆಗಳು ಗ್ರಾಮಗಳ ಅಭಿವೃದ್ಧಿಗಾಗಿ ಪ್ರತಿ ಜಿಲ್ಲೆಗೆ ಕೋಟಿ ರೂಪಾಯಿಗೂ ಮೀರಿ ವೆಚ್ಚ ಮಾಡುವ ಜೊತೆಗೆ ಅರಣ್ಯ ನಾಶ ತಡೆಗೂ ಯೋಜನೆ ರೂಪಿಸಲಾಗುತ್ತಿದೆ. ಸಮಾಜ ಕಲ್ಯಾಣ ಇಲಾಖೆ ಮತ್ತು ವಸತಿ ಶಿಕ್ಷಣ ಸಂಸ್ಥೆಗಳ ವಸತಿ ಶಾಲೆಗಳ ವಿದ್ಯಾರ್ಥಿಗಳಿಗಾಗಿ ₹ 2.37 ಕೋಟಿ ವೆಚ್ಚದಲ್ಲಿ ಸಮಗ್ರ ವ್ಯಕ್ತಿತ್ವ ಅಭಿವೃದ್ಧಿ ಕಾರ್ಯಕ್ರಮ ರೂಪಿಸಲಾಗಿದೆ. ಆ ವಿದ್ಯಾರ್ಥಿಗಳ ದೈಹಿಕ, ಸಾಮಾಜಿಕ, ಬೌದ್ಧಿಕ ಬೆಳವಣಿಗೆಗೆ ಪೂರಕವಾಗಿ ರೂಪಿಸಿರುವ ಯೋಜನೆಗೆ ರಾಜ್ಯ ಸರ್ಕಾರ ಅನುಮತಿ ನೀಡಿದೆ ಎಂದರು.</p>.<p>ನಿಯೋಜಿತ ರೋಟರಿ ಅಂತರರಾಷ್ಟ್ರೀಯ ನಿರ್ದೇಶಕ ಕೆ.ಪಿ. ನಾಗೇಶ್, 2023-24ನೇ ಸಾಲಿನ ಗವರ್ನರ್ ಬಿ. ಶ್ರೀನಿವಾಸಮೂರ್ತಿ, ರೋಟರಿ ಜಿಲ್ಲೆ 3192ರ ನೂತನ ಕಾರ್ಯದರ್ಶಿ ಕೆ.ಟಿ.ನಿರಂಜನ್, ಅಂತರರಾಷ್ಟ್ರೀಯ ನಿರ್ದೇಶಕ ಟಿ.ಎನ್. ಸುಬ್ರಹ್ಮಣ್ಯಂ ಭಾಗವಹಿಸಿದ್ದರು. ಕಾರ್ಯದರ್ಶಿಗಳಾದ ಬಿಳೆಗಿರಿ ಶಿವಕುಮಾರ್, ರಾಜರಾಮ್, ರಾಜೇಶ್ವರಿ, ಪ್ರಚಾರ ಸಮಿತಿ ನಿರ್ದೇಶಕ ಎ.ಸಿ.ಎನ್. ಮೂರ್ತಿ ಪ್ರಮಾಣವಚನ ಸ್ವೀಕರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಗ್ರಾಮಗಳ ಅಭಿವೃದ್ಧಿಗಾಗಿ ರೋಟರಿ ಸಂಸ್ಥೆಗಳು ₹ 100 ಕೋಟಿ ವೆಚ್ಚದಲ್ಲಿ ಶಿಕ್ಷಣ, ಆರೋಗ್ಯ, ಕುಡಿಯುವ ನೀರಿನ ವ್ಯವಸ್ಥೆ ಮಾಡುತ್ತಿವೆ’ ಎಂದು ರೋಟರಿ ಡಿಸ್ಟ್ರಿಕ್ಟ್ 3192ರ ಗವರ್ನರ್ ಎನ್.ಎಸ್. ಮಹದೇವ ಪ್ರಸಾದ್ ತಿಳಿಸಿದರು.</p>.<p>2024-2025 ನೇ ಸಾಲಿನ ಗವರ್ನರ್ ಆಗಿ ಪ್ರಮಾಣ ವಚನ ಸ್ವೀಕರಿಸಿ ಅವರು ಮಾತನಾಡಿದರು.</p>.<p>ಜನರಿಗೆ, ವನ್ಯಜೀವಿಗಳಿಗೆ ಬೇಸಿಗೆಯಲ್ಲಿ ಜಲಚೇತನ ಯೋಜನೆಯಡಿ ಕುಡಿಯುವ ನೀರಿನ ವ್ಯವಸ್ಥೆ, 9–14 ವರ್ಷ ವಯಸ್ಸಿನ ಮಕ್ಕಳಿಗೆ ರೋಗನಿರೋಧಕ ಚುಚ್ಚುಮದ್ದು ನೀಡುವುದು ಸೇರಿ ಹಲವು ಯೋಜನೆಗಳನ್ನು ರೂಪಿಸಲಾಗಿದೆ ಎಂದು ವಿವರಿಸಿದರು.</p>.<p>‘ರೋಟರಿ ಸಂಸ್ಥೆಗಳು ಗ್ರಾಮಗಳ ಅಭಿವೃದ್ಧಿಗಾಗಿ ಪ್ರತಿ ಜಿಲ್ಲೆಗೆ ಕೋಟಿ ರೂಪಾಯಿಗೂ ಮೀರಿ ವೆಚ್ಚ ಮಾಡುವ ಜೊತೆಗೆ ಅರಣ್ಯ ನಾಶ ತಡೆಗೂ ಯೋಜನೆ ರೂಪಿಸಲಾಗುತ್ತಿದೆ. ಸಮಾಜ ಕಲ್ಯಾಣ ಇಲಾಖೆ ಮತ್ತು ವಸತಿ ಶಿಕ್ಷಣ ಸಂಸ್ಥೆಗಳ ವಸತಿ ಶಾಲೆಗಳ ವಿದ್ಯಾರ್ಥಿಗಳಿಗಾಗಿ ₹ 2.37 ಕೋಟಿ ವೆಚ್ಚದಲ್ಲಿ ಸಮಗ್ರ ವ್ಯಕ್ತಿತ್ವ ಅಭಿವೃದ್ಧಿ ಕಾರ್ಯಕ್ರಮ ರೂಪಿಸಲಾಗಿದೆ. ಆ ವಿದ್ಯಾರ್ಥಿಗಳ ದೈಹಿಕ, ಸಾಮಾಜಿಕ, ಬೌದ್ಧಿಕ ಬೆಳವಣಿಗೆಗೆ ಪೂರಕವಾಗಿ ರೂಪಿಸಿರುವ ಯೋಜನೆಗೆ ರಾಜ್ಯ ಸರ್ಕಾರ ಅನುಮತಿ ನೀಡಿದೆ ಎಂದರು.</p>.<p>ನಿಯೋಜಿತ ರೋಟರಿ ಅಂತರರಾಷ್ಟ್ರೀಯ ನಿರ್ದೇಶಕ ಕೆ.ಪಿ. ನಾಗೇಶ್, 2023-24ನೇ ಸಾಲಿನ ಗವರ್ನರ್ ಬಿ. ಶ್ರೀನಿವಾಸಮೂರ್ತಿ, ರೋಟರಿ ಜಿಲ್ಲೆ 3192ರ ನೂತನ ಕಾರ್ಯದರ್ಶಿ ಕೆ.ಟಿ.ನಿರಂಜನ್, ಅಂತರರಾಷ್ಟ್ರೀಯ ನಿರ್ದೇಶಕ ಟಿ.ಎನ್. ಸುಬ್ರಹ್ಮಣ್ಯಂ ಭಾಗವಹಿಸಿದ್ದರು. ಕಾರ್ಯದರ್ಶಿಗಳಾದ ಬಿಳೆಗಿರಿ ಶಿವಕುಮಾರ್, ರಾಜರಾಮ್, ರಾಜೇಶ್ವರಿ, ಪ್ರಚಾರ ಸಮಿತಿ ನಿರ್ದೇಶಕ ಎ.ಸಿ.ಎನ್. ಮೂರ್ತಿ ಪ್ರಮಾಣವಚನ ಸ್ವೀಕರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>