‘ಕೆರೆಯ ಬೇಲಿಯನ್ನು ಕಿತ್ತು ಹಾಕಿರುವ ಕೆಲ ರೈತರು, ಕೃಷಿ ಚಟುವಟಿಕೆಗಳನ್ನು ನಡೆಸುತ್ತಿದ್ದರು. ಆ ಜಾಗವನ್ನೂ ತೆರವುಗೊಳಿಸಲಾಗಿದೆ. ಒತ್ತುವರಿ ತೆರವು ಮಾಡುವುದಷ್ಟೇ ಅಲ್ಲ, ವರ್ತೂರು ಕೆರೆಯ ಸಂರಕ್ಷಣೆಗೆ ಬೇಕಾದ ಕ್ರಮಗಳನ್ನು ಕೈಗೊಳ್ಳುತ್ತೇವೆ’ ಎಂದರು. ‘ವರ್ತೂರು ಕೆರೆ ಭಾಗದಲ್ಲಿ 30 ಎಕರೆ 17 ಗುಂಟೆ ಜಾಗ ಒತ್ತುವರಿ ಆಗಿದೆ ಎಂದು ಎ.ಟಿ.ರಾಮಸ್ವಾಮಿ ಆಯೋಗದ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಅದನ್ನು ಪರೀಶಿಲನೆ ನಡೆಸಲಾಗುತ್ತಿದೆ. ಹಂತ ಹಂತವಾಗಿ ಒತ್ತುವರಿ ಕಾರ್ಯಾಚರಣೆ ನಡೆಸುತ್ತೇವೆ’ ಎಂದರು.