<p><strong>ಬೆಂಗಳೂರು</strong>: ತಲಘಟ್ಟಪುರ ಠಾಣೆ ವ್ಯಾಪ್ತಿಯ ಪ್ರದೇಶಗಳಲ್ಲಿ ನಿಗಾ ವಹಿಸಲು 101 ಸಿ.ಸಿ ಟಿ.ವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು, ಇವುಗಳ ನಿರ್ವಹಣೆಯ ಕಮಾಂಡ್ ಕೇಂದ್ರವನ್ನು ಕಮಿಷನರ್ ಬಿ.ದಯಾನಂದ್ ಅವರು ಶನಿವಾರ ಉದ್ಘಾಟಿಸಿದರು.</p>.<p>ಚೇಂಜ್ ಮೇಕರ್ಸ್ ಆಫ್ ಕನಕಪುರ ಅಸೋಸಿಯೇಷನ್ (ಸಿಎಂಕೆಆರ್ಎ) ಸಹಯೋಗದೊಂದಿಗೆ ತಲಘಟ್ಟಪುರ ಪೊಲೀಸ್ ಠಾಣೆ ವ್ಯಾಪ್ತಿಯ ಪ್ರದೇಶಗಳಲ್ಲಿ ಕ್ಯಾಮೆರಾ ಅಳವಡಿಸಲಾಗಿದೆ. ಅಸೋಸಿಯೇಷನ್ ನೇಮಕ ಮಾಡಿರುವ ಸಿಬ್ಬಂದಿ ಕ್ಯಾಮೆರಾ ನಿರ್ವಹಣೆ ಹೊಣೆ ಹೊತ್ತುಕೊಂಡಿದ್ದಾರೆ.</p>.<p>ತಂತಿರಹಿತ ಕ್ಯಾಮೆರಾಗಳು ಇವಾಗಿದ್ದು, ಪ್ರತಿಯೊಂದು ಕ್ಯಾಮೆರಾ ಬಳಿಯೇ ಧ್ವನಿವರ್ಧಕ ಅಳವಡಿಸಲಾಗಿದೆ. ಕಮಾಂಡ್ ಕೇಂದ್ರದಲ್ಲಿರುವ ಸಿಬ್ಬಂದಿ, ದೃಶ್ಯಗಳನ್ನು ನೋಡಿ ಧ್ವನಿವರ್ಧಕ ಮೂಲಕ ಸೂಚನೆ ನೀಡಲು ಅವಕಾಶವಿದೆ.</p>.<p>‘ಪೊಲೀಸರು ಎಲ್ಲ ಸಂದರ್ಭದಲ್ಲಿ ಘಟನಾ ಸ್ಥಳದಲ್ಲಿ ಇರಲು ಸಾಧ್ಯವಿಲ್ಲ. ತಂತ್ರಜ್ಞಾನವನ್ನು ಸಮರ್ಥವಾಗಿ ಬಳಸಿಕೊಂಡು ಅಪರಾಧಗಳಿಗೆ ಕಡಿವಾಣ ಹಾಕಬೇಕಿದೆ’ ಎಂದು ದಯಾನಂದ್ ಹೇಳಿದರು.</p>.<p>ಸಿಎಂಕೆಆರ್ಎ ಕಾರ್ಯದರ್ಶಿ ವಿ.ಕೆ.ವತ್ಸ, ‘ಜನರ ಸುರಕ್ಷತೆ ಹಾಗೂ ಅಪರಾಧ ಕೃತ್ಯಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಕ್ಯಾಮೆರಾ ಅಳವಡಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಕಡೆ ಕ್ಯಾಮೆರಾಗಳನ್ನು ಅಳವಡಿಸುವ ಯೋಚನೆ ಇದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ತಲಘಟ್ಟಪುರ ಠಾಣೆ ವ್ಯಾಪ್ತಿಯ ಪ್ರದೇಶಗಳಲ್ಲಿ ನಿಗಾ ವಹಿಸಲು 101 ಸಿ.ಸಿ ಟಿ.ವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು, ಇವುಗಳ ನಿರ್ವಹಣೆಯ ಕಮಾಂಡ್ ಕೇಂದ್ರವನ್ನು ಕಮಿಷನರ್ ಬಿ.ದಯಾನಂದ್ ಅವರು ಶನಿವಾರ ಉದ್ಘಾಟಿಸಿದರು.</p>.<p>ಚೇಂಜ್ ಮೇಕರ್ಸ್ ಆಫ್ ಕನಕಪುರ ಅಸೋಸಿಯೇಷನ್ (ಸಿಎಂಕೆಆರ್ಎ) ಸಹಯೋಗದೊಂದಿಗೆ ತಲಘಟ್ಟಪುರ ಪೊಲೀಸ್ ಠಾಣೆ ವ್ಯಾಪ್ತಿಯ ಪ್ರದೇಶಗಳಲ್ಲಿ ಕ್ಯಾಮೆರಾ ಅಳವಡಿಸಲಾಗಿದೆ. ಅಸೋಸಿಯೇಷನ್ ನೇಮಕ ಮಾಡಿರುವ ಸಿಬ್ಬಂದಿ ಕ್ಯಾಮೆರಾ ನಿರ್ವಹಣೆ ಹೊಣೆ ಹೊತ್ತುಕೊಂಡಿದ್ದಾರೆ.</p>.<p>ತಂತಿರಹಿತ ಕ್ಯಾಮೆರಾಗಳು ಇವಾಗಿದ್ದು, ಪ್ರತಿಯೊಂದು ಕ್ಯಾಮೆರಾ ಬಳಿಯೇ ಧ್ವನಿವರ್ಧಕ ಅಳವಡಿಸಲಾಗಿದೆ. ಕಮಾಂಡ್ ಕೇಂದ್ರದಲ್ಲಿರುವ ಸಿಬ್ಬಂದಿ, ದೃಶ್ಯಗಳನ್ನು ನೋಡಿ ಧ್ವನಿವರ್ಧಕ ಮೂಲಕ ಸೂಚನೆ ನೀಡಲು ಅವಕಾಶವಿದೆ.</p>.<p>‘ಪೊಲೀಸರು ಎಲ್ಲ ಸಂದರ್ಭದಲ್ಲಿ ಘಟನಾ ಸ್ಥಳದಲ್ಲಿ ಇರಲು ಸಾಧ್ಯವಿಲ್ಲ. ತಂತ್ರಜ್ಞಾನವನ್ನು ಸಮರ್ಥವಾಗಿ ಬಳಸಿಕೊಂಡು ಅಪರಾಧಗಳಿಗೆ ಕಡಿವಾಣ ಹಾಕಬೇಕಿದೆ’ ಎಂದು ದಯಾನಂದ್ ಹೇಳಿದರು.</p>.<p>ಸಿಎಂಕೆಆರ್ಎ ಕಾರ್ಯದರ್ಶಿ ವಿ.ಕೆ.ವತ್ಸ, ‘ಜನರ ಸುರಕ್ಷತೆ ಹಾಗೂ ಅಪರಾಧ ಕೃತ್ಯಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಕ್ಯಾಮೆರಾ ಅಳವಡಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಕಡೆ ಕ್ಯಾಮೆರಾಗಳನ್ನು ಅಳವಡಿಸುವ ಯೋಚನೆ ಇದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>