2017ರಲ್ಲಿ ₹203.20 ಕೋಟಿ ವೆಚ್ಚದಲ್ಲಿ ಈಜಿಪುರ ಮೇಲ್ಸೇತುವೆ ನಿರ್ಮಿಸಲು ಟೆಂಡರ್ಗೆ ಅನುಮೋದನೆ ನೀಡಲಾಯಿತು. ಬಿಬಿಎಂಪಿ ಎಂಜಿನಿಯರ್ಗಳು, ಗುತ್ತಿಗೆದಾರರ ವಿಳಂಬದಿಂದ ಪ್ರಕರಣ ಹೈಕೋರ್ಟ್ ಮೆಟ್ಟಿಲೇರಿತ್ತು. ಗುತ್ತಿಗೆ ರದ್ದಾಗಿತ್ತು. 2022ರ ಮಾರ್ಚ್ನಲ್ಲಿ ಮೂರು ತಿಂಗಳಲ್ಲಿ ಹೊಸ ಟೆಂಡರ್ ಕರೆದು ಗುತ್ತಿಗೆ ನೀಡಬೇಕು ಎಂದು ಹೈಕೋರ್ಟ್ ತಾಕೀತು ಮಾಡಿದ್ದರೂ ಬಿಬಿಎಂಪಿ ಎಂಜಿನಿಯರ್ಗಳು ವಿಳಂಬ ನೀತಿ ಅನುಸರಿಸಿದ್ದರು. ನಿರ್ಮಾಣ ವೆಚ್ಚಗಳು ಅಧಿಕವಾದ್ದರಿಂದ ₹103.80 ಕೋಟಿ ಹೆಚ್ಚುವರಿ ನೀಡಬೇಕಾಗಿದೆ.
ಈಜಿಪುರ ಮೇಲ್ಸೇತುವೆ ಬಾಕಿ ಉಳಿದಿರುವ ಕಾಮಗಾರಿಗೆ ನಾಲ್ಕನೇ ಬಾರಿಗೆ 2023 ಮಾರ್ಚ್ 1ರಂದು ನಾಲ್ಕನೇ ಬಾರಿಗೆ ಟೆಂಡರ್ ಆಹ್ವಾನಿಸಿತ್ತು. 17ರಂದು ತಾಂತ್ರಿಕ ಬಿಡ್ ತೆರೆದು, ಏಕೈಕ ಅರ್ಹ ಬಿಡ್ದಾರರೊಂದಿಗೆ ಮಾತುಕತೆ ನಡೆಸಲಾಗಿತ್ತು. ಅದನ್ನು ಇನ್ನೂ ಪೂರ್ಣಗೊಳಿಸದೆ ಹಾಗೆಯೇ ಉಳಿಸಿಕೊಳ್ಳಲಾಗಿದೆ. ಆದರೆ, ಇದೇ ಸಂದರ್ಭದಲ್ಲಿ ಮಾರ್ಚ್ 17ರಂದು ಕರೆದಿದ್ದ ಹೈಡೆನ್ಸಿಟಿ ಕಾರಿಡಾರ್ ಟೆಂಡರ್ಗೆ ಮಾರ್ಚ್ 23ರಂದೇ ಅನುಮೋದನೆ ನೀಡಿ, ಕಾರ್ಯಾದೇಶವನ್ನೂ ನೀಡಲಾಗಿದೆ.