<p><strong>ಬೆಂಗಳೂರು: </strong>ನಗರದಲ್ಲಿ ವ್ಯವಸ್ಥಿತವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಜಾಲ ಭೇದಿಸಿರುವ ಕೋರಮಂಗಲ ಪೊಲೀಸರು, ಮೂವರು ಆರೋಪಿಗಳನ್ನು ಸೆರೆ ಹಿಡಿದಿದ್ದಾರೆ.</p>.<p>‘ಕನಕಪುರ ತಾಲ್ಲೂಕಿನ ಕುಪ್ಪದೊಡ್ಡಿಯ ಕೆ. ರವಿಕುಮಾರ್ (25), ಕೊಳ್ಳೇಗಾಲ ಚಿಕ್ಕಲಕೂರಿನ ಮಾರಪ್ಪ ಅಲಿಯಾಸ್ ಕುಳ್ಳ (24) ಹಾಗೂ ಒಡಿಶಾ ಕಟಕ್ ಜಿಲ್ಲೆಯ ರಾಜ ಕಿಶೋರ್ ನಾಯಕ್ (26) ಬಂಧಿತರು. ಅವರಿಂದ 106 ಕೆ.ಜಿ. ಗಾಂಜಾ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.</p>.<p>‘ಕೋರಮಂಗಲ 8ನೇ ಹಂತದ 2ನೇ ಮುಖ್ಯರಸ್ತೆಯ ಬೇಕರಿಯೊಂದರ ಬಳಿ ಬರುತ್ತಿದ್ದ ಆರೋಪಿಗಳು, ಪರಿಚಯಸ್ಥ ಗ್ರಾಹಕರಿಗೆ ಗಾಂಜಾ ಮಾರಾಟ ಮಾಡಿ ಹೋಗುತ್ತಿದ್ದರು. ಈ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ’ ಎಂದೂ ತಿಳಿಸಿದರು.</p>.<p class="Subhead">ಬಾಡಿಗೆ ಮನೆಯಲ್ಲಿ ಗಾಂಜಾ: ‘ಕೆಲಸದ ಸ್ಥಳದಲ್ಲಿ ಆರೋಪಿಗಳು ಪರಿಚಯವಾಗಿತ್ತು. ನಂತರ ಗಾಂಜಾ ಮಾರಾಟ ಮಾಡಿ ಅಕ್ರಮವಾಗಿ ಹಣ ಗಳಿಸಲು ಮುಂದಾಗಿದ್ದರು’ ಎಂದೂ ಪೊಲೀಸರು ಹೇಳಿದರು.</p>.<p>‘ಆಂಧ್ರಪ್ರದೇಶದಿಂದ ಗಾಂಜಾ ಖರೀದಿಸಿ ನಗರಕ್ಕೆ ತಂದಿದ್ದ ಆರೋಪಿಗಳು, ಬೇಗೂರು ಮೈಲಸಂದ್ರ ಬಳಿಯ ಬಾಡಿಗೆ ಮನೆಯೊಂದರಲ್ಲಿ ಸಂಗ್ರಹಿಸಿಟ್ಟಿದ್ದರು. ಮನೆ ಮೇಲೆ ದಾಳಿ ಮಾಡಿ, ಚೀಲದಲ್ಲಿ ಕಟ್ಟಿಟ್ಟಿದ್ದ ಗಾಂಜಾವನ್ನು ಜಪ್ತಿ ಮಾಡಲಾಗಿದೆ’ ಎಂದೂ ಹೇಳಿದರು.</p>.<p>‘ಕೆಲ ಕಾಲೇಜು ವಿದ್ಯಾರ್ಥಿಗಳು, ಕೆಲ ಖಾಸಗಿ ಕಂಪನಿ ಉದ್ಯೋಗಿಗಳು ಹಾಗೂ ಕಾರ್ಮಿಕರಿಗೆ ಆರೋಪಿಗಳು ಗಾಂಜಾ ಮಾರುತ್ತಿದ್ದರು. ಈ ಜಾಲದಲ್ಲಿ ಮತ್ತಷ್ಟು ಮಂದಿ ಭಾಗಿಯಾಗಿರುವ ಅನುಮಾನವಿದೆ’ ಎಂದೂ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ನಗರದಲ್ಲಿ ವ್ಯವಸ್ಥಿತವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಜಾಲ ಭೇದಿಸಿರುವ ಕೋರಮಂಗಲ ಪೊಲೀಸರು, ಮೂವರು ಆರೋಪಿಗಳನ್ನು ಸೆರೆ ಹಿಡಿದಿದ್ದಾರೆ.</p>.<p>‘ಕನಕಪುರ ತಾಲ್ಲೂಕಿನ ಕುಪ್ಪದೊಡ್ಡಿಯ ಕೆ. ರವಿಕುಮಾರ್ (25), ಕೊಳ್ಳೇಗಾಲ ಚಿಕ್ಕಲಕೂರಿನ ಮಾರಪ್ಪ ಅಲಿಯಾಸ್ ಕುಳ್ಳ (24) ಹಾಗೂ ಒಡಿಶಾ ಕಟಕ್ ಜಿಲ್ಲೆಯ ರಾಜ ಕಿಶೋರ್ ನಾಯಕ್ (26) ಬಂಧಿತರು. ಅವರಿಂದ 106 ಕೆ.ಜಿ. ಗಾಂಜಾ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.</p>.<p>‘ಕೋರಮಂಗಲ 8ನೇ ಹಂತದ 2ನೇ ಮುಖ್ಯರಸ್ತೆಯ ಬೇಕರಿಯೊಂದರ ಬಳಿ ಬರುತ್ತಿದ್ದ ಆರೋಪಿಗಳು, ಪರಿಚಯಸ್ಥ ಗ್ರಾಹಕರಿಗೆ ಗಾಂಜಾ ಮಾರಾಟ ಮಾಡಿ ಹೋಗುತ್ತಿದ್ದರು. ಈ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ’ ಎಂದೂ ತಿಳಿಸಿದರು.</p>.<p class="Subhead">ಬಾಡಿಗೆ ಮನೆಯಲ್ಲಿ ಗಾಂಜಾ: ‘ಕೆಲಸದ ಸ್ಥಳದಲ್ಲಿ ಆರೋಪಿಗಳು ಪರಿಚಯವಾಗಿತ್ತು. ನಂತರ ಗಾಂಜಾ ಮಾರಾಟ ಮಾಡಿ ಅಕ್ರಮವಾಗಿ ಹಣ ಗಳಿಸಲು ಮುಂದಾಗಿದ್ದರು’ ಎಂದೂ ಪೊಲೀಸರು ಹೇಳಿದರು.</p>.<p>‘ಆಂಧ್ರಪ್ರದೇಶದಿಂದ ಗಾಂಜಾ ಖರೀದಿಸಿ ನಗರಕ್ಕೆ ತಂದಿದ್ದ ಆರೋಪಿಗಳು, ಬೇಗೂರು ಮೈಲಸಂದ್ರ ಬಳಿಯ ಬಾಡಿಗೆ ಮನೆಯೊಂದರಲ್ಲಿ ಸಂಗ್ರಹಿಸಿಟ್ಟಿದ್ದರು. ಮನೆ ಮೇಲೆ ದಾಳಿ ಮಾಡಿ, ಚೀಲದಲ್ಲಿ ಕಟ್ಟಿಟ್ಟಿದ್ದ ಗಾಂಜಾವನ್ನು ಜಪ್ತಿ ಮಾಡಲಾಗಿದೆ’ ಎಂದೂ ಹೇಳಿದರು.</p>.<p>‘ಕೆಲ ಕಾಲೇಜು ವಿದ್ಯಾರ್ಥಿಗಳು, ಕೆಲ ಖಾಸಗಿ ಕಂಪನಿ ಉದ್ಯೋಗಿಗಳು ಹಾಗೂ ಕಾರ್ಮಿಕರಿಗೆ ಆರೋಪಿಗಳು ಗಾಂಜಾ ಮಾರುತ್ತಿದ್ದರು. ಈ ಜಾಲದಲ್ಲಿ ಮತ್ತಷ್ಟು ಮಂದಿ ಭಾಗಿಯಾಗಿರುವ ಅನುಮಾನವಿದೆ’ ಎಂದೂ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>