<p><strong>ಬೆಂಗಳೂರು:</strong> ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ನಡೆದ ಕಾಲ್ತುಳಿತ ದುರಂತದಲ್ಲಿ 11 ಜನರು ಉಸಿರುಗಟ್ಟಿಯೇ ಸಾವಿಗೀಡಾಗಿದ್ದಾರೆ. ಕೆಲವರ ದೇಹದಲ್ಲಿ ಮೂಳೆಗಳು ಮುರಿದಿವೆ ಎಂಬ ವಿಚಾರ ಮರಣೋತ್ತರ ಪರೀಕ್ಷೆಯ ಪ್ರಾಥಮಿಕ ವರದಿಯಿಂದ ಗೊತ್ತಾಗಿದೆ. </p>.<p>ಬೌರಿಂಗ್ ಮತ್ತು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹಗಳನ್ನು ಬುಧವಾರ ರಾತ್ರಿಯೇ ವಾರಸುದಾರರಿಗೆ ಹಸ್ತಾಂತರಿಸಲಾಯಿತು. ಎಲ್ಲರ ಅಂತ್ಯಕ್ರಿಯೆಗಳು ಗುರುವಾರ ನೆರವೇರಿತ್ತು. </p>.<p>ಕಾಲ್ತುಳಿತದ ವೇಳೆ ಗಾಯಗೊಂಡಿರುವ ಹಲವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವೈದೇಹಿ, ಬೌರಿಂಗ್, ಮಣಿಪಾಲ್ ಹಾಗೂ ಸ್ಪರ್ಶ್ ಆಸ್ಪತ್ರೆಯಲ್ಲಿ ಕೆಲವರು ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೆಲವರಿಗೆ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಐದಕ್ಕೂ ಹೆಚ್ಚು ಮಂದಿ ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. </p>.<p>ಕಾಲ್ತುಳಿತದ ವೇಳೆ ಗಾಯಗೊಂಡಿರುವ ಉತ್ತರ ವಿಭಾಗ ಡಿಸಿಪಿ ಸೈದುಲು ಅಡಾವತ್ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಶೀಘ್ರ ಮನೆಗೆ ಕಳುಹಿಸಲಾಗುವುದು ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ನಡೆದ ಕಾಲ್ತುಳಿತ ದುರಂತದಲ್ಲಿ 11 ಜನರು ಉಸಿರುಗಟ್ಟಿಯೇ ಸಾವಿಗೀಡಾಗಿದ್ದಾರೆ. ಕೆಲವರ ದೇಹದಲ್ಲಿ ಮೂಳೆಗಳು ಮುರಿದಿವೆ ಎಂಬ ವಿಚಾರ ಮರಣೋತ್ತರ ಪರೀಕ್ಷೆಯ ಪ್ರಾಥಮಿಕ ವರದಿಯಿಂದ ಗೊತ್ತಾಗಿದೆ. </p>.<p>ಬೌರಿಂಗ್ ಮತ್ತು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹಗಳನ್ನು ಬುಧವಾರ ರಾತ್ರಿಯೇ ವಾರಸುದಾರರಿಗೆ ಹಸ್ತಾಂತರಿಸಲಾಯಿತು. ಎಲ್ಲರ ಅಂತ್ಯಕ್ರಿಯೆಗಳು ಗುರುವಾರ ನೆರವೇರಿತ್ತು. </p>.<p>ಕಾಲ್ತುಳಿತದ ವೇಳೆ ಗಾಯಗೊಂಡಿರುವ ಹಲವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವೈದೇಹಿ, ಬೌರಿಂಗ್, ಮಣಿಪಾಲ್ ಹಾಗೂ ಸ್ಪರ್ಶ್ ಆಸ್ಪತ್ರೆಯಲ್ಲಿ ಕೆಲವರು ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೆಲವರಿಗೆ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಐದಕ್ಕೂ ಹೆಚ್ಚು ಮಂದಿ ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. </p>.<p>ಕಾಲ್ತುಳಿತದ ವೇಳೆ ಗಾಯಗೊಂಡಿರುವ ಉತ್ತರ ವಿಭಾಗ ಡಿಸಿಪಿ ಸೈದುಲು ಅಡಾವತ್ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಶೀಘ್ರ ಮನೆಗೆ ಕಳುಹಿಸಲಾಗುವುದು ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>