<p><strong>ಬೆಂಗಳೂರು:</strong> ಮಲ್ಲೇಶ್ವರದ ರಾಜಾಶಂಕರ್ ಆಟದ ಮೈದಾನದಲ್ಲಿ ಕಬ್ಬಿಣದ ಗೇಟ್ ಬಿದ್ದು ಬಾಲಕನೊಬ್ಬ ಭಾನುವಾರ ಮೃತಪಟ್ಟಿದ್ದಾನೆ.</p>.<p>ಪ್ಯಾಲೇಸ್ ಗುಟ್ಟಹಳ್ಳಿಯ ವಿವೇಕಾನಂದ ಬ್ಲಾಕ್ನ ನಿವಾಸಿ ವಿಜಯ್ ಪವಾರ್ ಎಂಬುವರ ಪುತ್ರ ನಿರಂಜನ್ (11) ಮೃತ ಬಾಲಕ. ಈ ಬಗ್ಗೆ ಮಲ್ಲೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಆಟದ ಮೈದಾನ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿದೆ. ತೀವ್ರ ಗಾಯಗೊಂಡಿದ್ದ ಬಾಲಕನನ್ನು ಕೆ.ಸಿ.ಜನರಲ್ ಆಸ್ಪತ್ರೆಗೆ ಒಯ್ದಿದ್ದು, ಅಲ್ಲಿ ಮೃತಪಟ್ಟಿದ್ದಾನೆ ಎಂದು ಪೊಲೀಸರು ಹೇಳಿದರು.</p>.<p>5ನೇ ತರಗತಿ ಓದುತ್ತಿದ್ದ ಬಾಲಕ ಭಾನುವಾರ ರಜೆಯಿದ್ದರಿಂದ ಮಧ್ಯಾಹ್ನ ಆಟವಾಡಲು ರಾಜಾಶಂಕರ್ ಆಟದ ಮೈದಾನಕ್ಕೆ ತೆರಳಿದ್ದ. ಕಬ್ಬಿಣದ ಗೇಟ್ ತೆಗೆಯುವಾಗ ಏಕಾಏಕಿ ಮೈಮೇಲೆ ಬಿದ್ದಿದ್ದು, ತಲೆಗೆ ತೀವ್ರವಾಗಿ ಪೆಟ್ಟಾಗಿದ್ದರಿಂದ ಸ್ಥಳದಲ್ಲೇ ಕುಸಿದು ಬಿದ್ದಿದ್ದ.</p>.<p>ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಪೋಷಕರು ಆತನನ್ನು ಕೆ.ಸಿ.ಜನರಲ್ ಆಸ್ಪತ್ರೆಗೆ ಸೇರಿಸಿದ್ದರು . ಆದರೆ ರಕ್ತಸ್ರಾವದಿಂದ ಬಾಲಕ ಮೃತಪಟ್ಟಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಈ ಬಗ್ಗೆ ತನಿಖೆ ಮುಂದುವರೆದಿದೆ ಎಂದು ಪೊಲೀಸರು ಹೇಳಿದರು.</p>.<p>ಬಿಬಿಎಂಪಿ ಅಧಿಕಾರಿಗಳು, ಸಿಬ್ಬಂದಿ ವಿರುದ್ಧ ಸ್ಥಳೀಯರು ಹಾಗೂ ಕ್ರೀಡಾಪಟುಗಳು ಆಕ್ರೋಶ ವ್ಯಕ್ತಪಡಿಸಿದರು. ಅಧಿಕಾರಿಗಳ ನಿರ್ಲಕ್ಷ್ಯವೇ ಸಾವಿಗೆ ಕಾರಣ ಎಂದು ಆಕ್ರೋಶ ಹೊರಹಾಕಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಮಲ್ಲೇಶ್ವರದ ರಾಜಾಶಂಕರ್ ಆಟದ ಮೈದಾನದಲ್ಲಿ ಕಬ್ಬಿಣದ ಗೇಟ್ ಬಿದ್ದು ಬಾಲಕನೊಬ್ಬ ಭಾನುವಾರ ಮೃತಪಟ್ಟಿದ್ದಾನೆ.</p>.<p>ಪ್ಯಾಲೇಸ್ ಗುಟ್ಟಹಳ್ಳಿಯ ವಿವೇಕಾನಂದ ಬ್ಲಾಕ್ನ ನಿವಾಸಿ ವಿಜಯ್ ಪವಾರ್ ಎಂಬುವರ ಪುತ್ರ ನಿರಂಜನ್ (11) ಮೃತ ಬಾಲಕ. ಈ ಬಗ್ಗೆ ಮಲ್ಲೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಆಟದ ಮೈದಾನ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿದೆ. ತೀವ್ರ ಗಾಯಗೊಂಡಿದ್ದ ಬಾಲಕನನ್ನು ಕೆ.ಸಿ.ಜನರಲ್ ಆಸ್ಪತ್ರೆಗೆ ಒಯ್ದಿದ್ದು, ಅಲ್ಲಿ ಮೃತಪಟ್ಟಿದ್ದಾನೆ ಎಂದು ಪೊಲೀಸರು ಹೇಳಿದರು.</p>.<p>5ನೇ ತರಗತಿ ಓದುತ್ತಿದ್ದ ಬಾಲಕ ಭಾನುವಾರ ರಜೆಯಿದ್ದರಿಂದ ಮಧ್ಯಾಹ್ನ ಆಟವಾಡಲು ರಾಜಾಶಂಕರ್ ಆಟದ ಮೈದಾನಕ್ಕೆ ತೆರಳಿದ್ದ. ಕಬ್ಬಿಣದ ಗೇಟ್ ತೆಗೆಯುವಾಗ ಏಕಾಏಕಿ ಮೈಮೇಲೆ ಬಿದ್ದಿದ್ದು, ತಲೆಗೆ ತೀವ್ರವಾಗಿ ಪೆಟ್ಟಾಗಿದ್ದರಿಂದ ಸ್ಥಳದಲ್ಲೇ ಕುಸಿದು ಬಿದ್ದಿದ್ದ.</p>.<p>ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಪೋಷಕರು ಆತನನ್ನು ಕೆ.ಸಿ.ಜನರಲ್ ಆಸ್ಪತ್ರೆಗೆ ಸೇರಿಸಿದ್ದರು . ಆದರೆ ರಕ್ತಸ್ರಾವದಿಂದ ಬಾಲಕ ಮೃತಪಟ್ಟಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಈ ಬಗ್ಗೆ ತನಿಖೆ ಮುಂದುವರೆದಿದೆ ಎಂದು ಪೊಲೀಸರು ಹೇಳಿದರು.</p>.<p>ಬಿಬಿಎಂಪಿ ಅಧಿಕಾರಿಗಳು, ಸಿಬ್ಬಂದಿ ವಿರುದ್ಧ ಸ್ಥಳೀಯರು ಹಾಗೂ ಕ್ರೀಡಾಪಟುಗಳು ಆಕ್ರೋಶ ವ್ಯಕ್ತಪಡಿಸಿದರು. ಅಧಿಕಾರಿಗಳ ನಿರ್ಲಕ್ಷ್ಯವೇ ಸಾವಿಗೆ ಕಾರಣ ಎಂದು ಆಕ್ರೋಶ ಹೊರಹಾಕಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>