ಬೆಂಗಳೂರು: ‘ಬಿಬಿಎಂಪಿಗೆ ಸೇರ್ಪಡೆಯಾಗಿದ್ದ 110 ಹಳ್ಳಿಗಳ ವ್ಯಾಪ್ತಿಯಲ್ಲಿ ಕುಡಿಯುವ ನೀರು, ಒಳಚರಂಡಿ ವ್ಯವಸ್ಥೆ ಕಲ್ಪಿಸಲು ಜಲಮಂಡಳಿ ಕೈಗೊಂಡ ಕಾಮಗಾರಿಗಳು ಪೂರ್ಣಗೊಂಡಿರುವ ಕಡೆ ಕತ್ತರಿಸಲಾದ ರಸ್ತೆಗಳನ್ನು ಎರಡು ತಿಂಗಳುಗಳ ಒಳಗೆ ದುರಸ್ತಿಪಡಿಸಬೇಕು’ ಎಂದು ಪಾಲಿಕೆಯ ಮುಖ್ಯ ಆಯುಕ್ತ ಗೌರವ್ ಗುಪ್ತ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.