ನೆಲಮಂಗಲ: ‘ಶಿಕ್ಷಣ ಇಲಾಖೆ ನೌಕರರ ಸಹಕಾರ ಸಂಘವು ಕಳೆದ ಆರ್ಥಿಕ ಸಾಲಿನಲ್ಲಿ ₹ 1.13 ಕೋಟಿ ಸಾಲ ನೀಡಿದ್ದು, ₹ 15 ಲಕ್ಷ ಲಾಭ ಗಳಿಸಿದೆ’ ಎಂದು ಸಂಘದ ಅಧ್ಯಕ್ಷ ಅಧ್ಯಕ್ಷ ಬಿ.ಮಲ್ಲೇಶಯ್ಯ ತಿಳಿಸಿದರು.
ಸಂಘದ ಸರ್ವ ಸದಸ್ಯರ ಸಭೆಯಲ್ಲಿ ಮಾತನಾಡಿದ ಅವರು, ‘ತಾಲ್ಲೂಕಿನಲ್ಲಿ ಸುಮಾರು 950 ಶಿಕ್ಷಕರಿದ್ದು, 750 ಮಂದಿ ಸಂಘದ ಸದಸ್ಯತ್ವ ಪಡೆದಿದ್ದಾರೆ. ಸಂಘವು ₹40 ಲಕ್ಷ ಪಾಲು ಬಂಡವಾಳ ಹೊಂದಿದೆ ’ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ಹನುಮಾನಾಯಕ್ ಸಭೆಯನ್ನು ಉದ್ಘಾಟಿಸಿದರು. ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಟಿ.ವಾಸುದೇವಮೂರ್ತಿ ಸದಸ್ಯರ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಮತ್ತು ನಿವೃತ್ತ ಸದಸ್ಯರನ್ನು ಸನ್ಮಾನಿಸಿದರು.