ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

12 ಅಲೆಕ್ಸಾಂಡ್ರಿಯಾ ಗಿಳಿಗಳ ರಕ್ಷಣೆ

Last Updated 23 ಜನವರಿ 2023, 20:15 IST
ಅಕ್ಷರ ಗಾತ್ರ

ಬೆಂಗಳೂರು: ಚೆನ್ನೈನಿಂದ ಬೆಂಗಳೂರಿಗೆ ಖಾಸಗಿ ಬಸ್‌ಗಳಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 12 ಅಲೆಕ್ಸಾಂಡ್ರಿಯಾ ಗಿಳಿಗಳನ್ನು ಸಿಐಡಿ ಅರಣ್ಯ ವಿಭಾಗದ ಪೊಲೀಸರು ರಕ್ಷಿಸಿದ್ದು, ಪ್ರಕರಣ ಸಂಬಂಧ ನಾಲ್ವರನ್ನು ಬಂಧಿಸಿದ್ದಾರೆ.

ತಮಿಳುನಾಡಿನ ಖಾಸಗಿ ಕಂಪನಿ ಉದ್ಯೋಗಿ ಅಬುರಾರ್ (27), ಬಸ್ ಚಾಲಕ ಗುರುವಾಯೂರಪ್ಪನ್ (40), ಬೆಂಗಳೂರು ನೀಲಸಂದ್ರದ ಬಿ.ಕಾಂ. ವಿದ್ಯಾರ್ಥಿ ಮಿರ್ಜಾ ಮೊಹಮ್ಮದ್ (20) ಹಾಗೂ ಮಂಡ್ಯ ಜಿಲ್ಲೆಯ ನಾಗಮಂಗಲದ ಕೃಷ್ಣ (24) ಬಂಧಿತರು.

‘ಗಿಳಿಗಳನ್ನು ಹಿಡಿಯುತ್ತಿದ್ದ ಆರೋಪಿಗಳು, ಬೆಂಗಳೂರು ಹಾಗೂ ವಿವಿಧ ನಗರಗಳ ವ್ಯಾಪಾರಿಗಳಿಗೆ ಪೂರೈಕೆ ಮಾಡುತ್ತಿದ್ದರು. ರಕ್ಷಿಸಲಾದ ಗಿಳಿಗಳನ್ನು ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದ ಸುಪರ್ದಿಗೆ ನೀಡಲಾಗಿದೆ’ ಎಂದು ಸಿಐಡಿ ಮೂಲಗಳು ಹೇಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT