<p><strong>ಬೆಂಗಳೂರು: </strong>‘ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ಖಾತೆಗೆ ಆಧಾರ್ ಜೋಡಣೆ ಮಾಡಬೇಕು’ ಎಂಬ ಸಂದೇಶ ನಂಬಿ ಗ್ರಾಹಕರೊಬ್ಬರು ₹ 12.29 ಲಕ್ಷ ಕಳೆದುಕೊಂಡಿದ್ದಾರೆ.</p>.<p>ಈ ವಂಚನೆ ಬಗ್ಗೆ ಈಶಾನ್ಯ ವಿಭಾಗದ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>‘ನಾಗವಾರ ವೀರಣ್ಣಪಾಳ್ಯದ 49 ವರ್ಷದ ಮಹಿಳೆಯೊಬ್ಬರು, ಎಸ್ಬಿಐನಲ್ಲಿ ಖಾತೆ ಹೊಂದಿದ್ದಾರೆ. ‘ನಿಮ್ಮ ಎಸ್ಬಿಐ ಖಾತೆಗೆ ಕೆವೈಸಿ (ಗ್ರಾಹಕರ ಮಾಹಿತಿ) ಹಾಗೂ ಆಧಾರ್ ಜೋಡಣೆ ಮಾಡಬೇಕು’ ಎಂದು ಜೂನ್ 13ರಂದು ಮಹಿಳೆಯ ಮೊಬೈಲ್ಗೆ ಸಂದೇಶ ಬಂದಿತ್ತು’ ಎಂದು ಪೊಲೀಸರು ಹೇಳಿದರು.</p>.<p>‘ಸಂದೇಶದಲ್ಲಿದ್ದ ಮೊಬೈಲ್ ನಂಬರ್ಗೆ ಮಹಿಳೆ ಕರೆ ಮಾಡಿದ್ದರು. ಬ್ಯಾಂಕ್ ಪ್ರತಿನಿಧಿ ಸೋಗಿನಲ್ಲಿ ಮಾತನಾಡಿದ್ದ ಆರೋಪಿ, ಮಹಿಳೆಯ ಬ್ಯಾಂಕ್ ಖಾತೆ ಮಾಹಿತಿ ತಿಳಿದುಕೊಂಡಿದ್ದ. ಲಿಂಕ್ ಕಳುಹಿಸಿ ಅದನ್ನು ತೆರೆಯುವಂತೆಯೂ ಹೇಳಿದ್ದ. ಆತನ ಮಾತು ನಂಬಿದ್ದ ಮಹಿಳೆ, ಲಿಂಕ್ ಕ್ಲಿಕ್ ಮಾಡಿದ್ದರು. ಅದಾದ ಕೆಲ ನಿಮಿಷಗಳಲ್ಲೇ ಹಂತ ಹಂತವಾಗಿ ಖಾತೆಯಿಂದ ₹ 12.29 ಲಕ್ಷ ಕಡಿತವಾಗಿದೆ’ ಎಂದೂ ತಿಳಿಸಿದರು.</p>.<p>‘ಹಣ ಕಡಿತದ ನಂತರ ಆರೋಪಿ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದಾನೆ. ಬ್ಯಾಂಕ್ನಲ್ಲಿ ವಿಚಾರಿಸಿದಾಗ ಯಾವುದೇ ಪ್ರತಿಕ್ರಿಯೆ ಸಿಕ್ಕಿಲ್ಲ. ಬಳಿಕ ಮಹಿಳೆಯು ಠಾಣೆಗೆ ದೂರು ನೀಡಿದ್ದಾರೆ‘ ಎಂದೂ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>‘ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ಖಾತೆಗೆ ಆಧಾರ್ ಜೋಡಣೆ ಮಾಡಬೇಕು’ ಎಂಬ ಸಂದೇಶ ನಂಬಿ ಗ್ರಾಹಕರೊಬ್ಬರು ₹ 12.29 ಲಕ್ಷ ಕಳೆದುಕೊಂಡಿದ್ದಾರೆ.</p>.<p>ಈ ವಂಚನೆ ಬಗ್ಗೆ ಈಶಾನ್ಯ ವಿಭಾಗದ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>‘ನಾಗವಾರ ವೀರಣ್ಣಪಾಳ್ಯದ 49 ವರ್ಷದ ಮಹಿಳೆಯೊಬ್ಬರು, ಎಸ್ಬಿಐನಲ್ಲಿ ಖಾತೆ ಹೊಂದಿದ್ದಾರೆ. ‘ನಿಮ್ಮ ಎಸ್ಬಿಐ ಖಾತೆಗೆ ಕೆವೈಸಿ (ಗ್ರಾಹಕರ ಮಾಹಿತಿ) ಹಾಗೂ ಆಧಾರ್ ಜೋಡಣೆ ಮಾಡಬೇಕು’ ಎಂದು ಜೂನ್ 13ರಂದು ಮಹಿಳೆಯ ಮೊಬೈಲ್ಗೆ ಸಂದೇಶ ಬಂದಿತ್ತು’ ಎಂದು ಪೊಲೀಸರು ಹೇಳಿದರು.</p>.<p>‘ಸಂದೇಶದಲ್ಲಿದ್ದ ಮೊಬೈಲ್ ನಂಬರ್ಗೆ ಮಹಿಳೆ ಕರೆ ಮಾಡಿದ್ದರು. ಬ್ಯಾಂಕ್ ಪ್ರತಿನಿಧಿ ಸೋಗಿನಲ್ಲಿ ಮಾತನಾಡಿದ್ದ ಆರೋಪಿ, ಮಹಿಳೆಯ ಬ್ಯಾಂಕ್ ಖಾತೆ ಮಾಹಿತಿ ತಿಳಿದುಕೊಂಡಿದ್ದ. ಲಿಂಕ್ ಕಳುಹಿಸಿ ಅದನ್ನು ತೆರೆಯುವಂತೆಯೂ ಹೇಳಿದ್ದ. ಆತನ ಮಾತು ನಂಬಿದ್ದ ಮಹಿಳೆ, ಲಿಂಕ್ ಕ್ಲಿಕ್ ಮಾಡಿದ್ದರು. ಅದಾದ ಕೆಲ ನಿಮಿಷಗಳಲ್ಲೇ ಹಂತ ಹಂತವಾಗಿ ಖಾತೆಯಿಂದ ₹ 12.29 ಲಕ್ಷ ಕಡಿತವಾಗಿದೆ’ ಎಂದೂ ತಿಳಿಸಿದರು.</p>.<p>‘ಹಣ ಕಡಿತದ ನಂತರ ಆರೋಪಿ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದಾನೆ. ಬ್ಯಾಂಕ್ನಲ್ಲಿ ವಿಚಾರಿಸಿದಾಗ ಯಾವುದೇ ಪ್ರತಿಕ್ರಿಯೆ ಸಿಕ್ಕಿಲ್ಲ. ಬಳಿಕ ಮಹಿಳೆಯು ಠಾಣೆಗೆ ದೂರು ನೀಡಿದ್ದಾರೆ‘ ಎಂದೂ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>