<p><strong>ಬೆಂಗಳೂರು</strong>: ‘ನಗರದಲ್ಲಿ ಪರಿಷೆ ಮತ್ತು ಕರಗಕ್ಕೆ ಜನ ಸೇರಿದಷ್ಟು ಬೇರೆ ಯಾವುದೇ ಧಾರ್ಮಿಕ ಕಾರ್ಯಕ್ರಮಗಳಿಗೆ ಸೇರುವುದಿಲ್ಲ. ಬಸವನಗುಡಿಯಲ್ಲಿ ಪ್ರತಿವರ್ಷ ಎರಡು ದಿನ ನಡೆಯುತ್ತಿದ್ದ ಕಡಲೆಕಾಯಿ ಪರಿಷೆಯನ್ನು ಈ ಬಾರಿ ಐದು ದಿನಕ್ಕೆ ವಿಸ್ತರಿಸಲಾಗಿತ್ತು, ಒಟ್ಟು 12.50 ಲಕ್ಷ ಜನರು ಭಾಗವಹಿಸಿದ್ದರು’ ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.</p>.<p>ಬಸವನಗುಡಿ ದೊಡ್ಡಬಸವೇಶ್ವರ ದೇಗುಲ ಆವರಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಕಡಲೆಕಾಯಿ ಪರಿಷೆಯ ಯಶಸ್ಸಿಗೆ ಕಾರಣರಾದ ವಿವಿಧ ಇಲಾಖೆಗಳ ಅಧಿಕಾರಿ ಹಾಗೂ ಸಿಬ್ಬಂದಿಗೆ ಗೌರವ ಸಮರ್ಪಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಪರಿಷೆ ಹಾಗೂ ಕರಗ ಬೆಂಗಳೂರಿನ ಹೆಗ್ಗುರುತು. ಈ ಬಾರಿ ಪರಿಷೆಗೆ ಹೆಚ್ಚಿನ ಭಕ್ತರನ್ನು ಆಕರ್ಷಿಸಲು ದೀಪಾಲಂಕಾರ ಹಾಗೂ ಪುಷ್ಪಾಲಂಕಾರ ಮಾಡಲಾಗಿತ್ತು. ಇದು ಪರಿಷೆಗೆ ಬರುವವರ ಪ್ರಮಾಣವನ್ನು ಹೆಚ್ಚಿಸಿತು’ ಎಂದು ವಿವರಿಸಿದರು.</p>.<p>‘ವ್ಯಾಪಾರಸ್ಥರಿಗೆ ಅನುಕೂಲ ಆಗುವಂತೆ ಕರ ವಸೂಲಿಯನ್ನು ಎರಡು ವರ್ಷದಿಂದ ರದ್ದುಪಡಿಸಲಾಗಿದೆ. ಪ್ಲಾಸ್ಟಿಕ್ ನಿರ್ಬಂಧಿಸಲಾಗಿತ್ತು. ಆದರೂ ಪ್ಲಾಸ್ಟಿಕ್ ಬಳಸಿದ ಅಂಗಡಿಗಳಿಗೆ ದಂಡ ವಿಧಿಸಿ, ಆ ಅಂಗಡಿಗಳ ತೆರವಿಗೆ ಅಧಿಕಾರಿಗಳು ಕ್ರಮಕೈಗೊಂಡಿದ್ದರು’ ಎಂದರು.</p>.<p>ಪರಿಷೆ ಮುಗಿದ ಬಳಿಕ ಸ್ವಚ್ಛತಾ ಕಾರ್ಯ ಹಮ್ಮಿಕೊಂಡಾಗ 135 ಟನ್ ಒಣ ಮತ್ತು ಹಸಿ ಕಸ ಸಂಗ್ರಹವಾಗಿತ್ತು. ತ್ಯಾಜ್ಯ ವಿಲೇವಾರಿ ಮಾಡಲಾಗಿದೆ ಎಂದು ಹೇಳಿದರು.</p>.<p>ಬಿಎಂಎಸ್ ಕಾಲೇಜಿನ ಗುತ್ತಿಗೆ ಅವಧಿ ಮುಗಿದಿತ್ತು. ಈಗ ಗುತ್ತಿಗೆ ನವೀಕರಣಗೊಂಡಿದ್ದು ಇನ್ನು ಮುಂದೆ ದೇವಸ್ಥಾನಕ್ಕೆ ಪ್ರತಿ ವರ್ಷ ₹ 4-5 ಕೋಟಿ ಆದಾಯ ಬರಲಿದೆ ಎಂದು ತಿಳಿಸಿದರು.</p>.<p>‘ಪರಿಷೆಗಾಗಿ 800 ಪೊಲೀಸರು ಕರ್ತವ್ಯ ನಿರ್ವಹಿಸಿದ್ದಾರೆ. ಜತೆಗೆ ಸ್ವಯಂಸೇವಾ ಸಂಘಟನೆಗಳು ಭಾಗವಹಿಸಿ ಪ್ಲಾಸ್ಟಿಕ್ ಬಗ್ಗೆ ಜಾಗೃತಿ ಮೂಡಿಸಿವೆ. ಮುಂದಿನ ವರ್ಷ ದಾಖಲೆಯ ಪ್ರಮಾಣದಲ್ಲಿ ಭಕ್ತರು ಬರುವಂತೆ ನೋಡಿಕೊಳ್ಳಬೇಕಿದೆ’ ಎಂದರು.</p>.<p>ಎಐಸಿಸಿ ಕಾರ್ಯದರ್ಶಿ ಯು.ಬಿ. ವೆಂಕಟೇಶ್ ಮಾತನಾಡಿ, ‘ಮುಜರಾಯಿ ಸಚಿವರ ಅಧ್ಯಕ್ಷತೆಯಲ್ಲಿ ಈ ಬಾರಿಯ ಪರಿಷೆ ಬಹಳ ವ್ಯವಸ್ಥಿತವಾಗಿ ಹಾಗೂ ಅಚ್ಚುಕಟ್ಟಾಗಿ ಜರುಗಿತು. ಮೂರೂವರೆ ಸಾವಿರ ವ್ಯಾಪಾರಸ್ಥರು ಮಳಿಗೆಗಳನ್ನು ಹಾಕಿದ್ದರು’ ಎಂದು ಹೇಳಿದರು.</p>.<p>ಮುಜರಾಯಿ ಇಲಾಖೆಯ ಆಯುಕ್ತ ಶರತ್, ಡಿಸಿಪಿ ಲೋಕೇಶ್ ಬಿ. ಜಗಲಾಸರ್, ಎಸಿಪಿ ಮಂಜುನಾಥ, ಉಮಾಶಂಕರ, ಪಶ್ಚಿಮ ನಗರ ಪಾಲಿಕೆ ಆಯುಕ್ತ ರಾಜೇಂದ್ರ ಕೆ.ವಿ., ಎಇಇ ಶಶಿಕಲಾ, ಲೋಹಿತ್, ಸಚಿನ್ ಪಾಟೀಲ, ದೇವಸ್ಥಾನ ಸಿಬ್ಬಂದಿ ಭಾಗವಹಿಸಿದ್ದರು.</p>.<p><strong>ಬೆಂಗಳೂರು</strong> <strong>ಕರಗಕ್ಕೆ ತಯಾರಿ..</strong></p><p>ಬೆಂಗಳೂರು ಕರಗ 2026ರ ಏಪ್ರಿಲ್ ತಿಂಗಳಲ್ಲಿ ನಡೆಯಬಹುದು. ಆದ್ದರಿಂದ ಜನವರಿ ತಿಂಗಳಿಂದಲೇ ಕರಗದ ರೂಪುರೇಷೆ ತಯಾರಿಸಲಾಗುವುದು’ ಎಂದು ರಾಮಲಿಂಗಾರೆಡ್ಡಿ ತಿಳಿಸಿದರು. ‘ಕಳೆದ ಬಾರಿ ಸಾಲು ಸಾಲು ರಜೆಗಳು ಬಂದಿದ್ದರಿಂದ ಹಣ ಬಿಡುಗಡೆಯಲ್ಲಿ ಅನನುಕೂಲವಾಗಿತ್ತು. ಈ ಬಾರಿ ಮುಂಚಿತವಾಗಿಯೇ ಹಣ ಬಿಡುಗಡೆ ಮಾಡಲಾಗುವುದು. ಕರಗಕ್ಕೆ ಬೇರೆ ರಾಜ್ಯದ ಜನರೂ ಬರುವಂತೆ ಮಾಡಲು ಯೋಜನೆ ರೂಪಿಸಲಾಗುವುದು. ಈ ಬಾರಿ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗುವುದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ನಗರದಲ್ಲಿ ಪರಿಷೆ ಮತ್ತು ಕರಗಕ್ಕೆ ಜನ ಸೇರಿದಷ್ಟು ಬೇರೆ ಯಾವುದೇ ಧಾರ್ಮಿಕ ಕಾರ್ಯಕ್ರಮಗಳಿಗೆ ಸೇರುವುದಿಲ್ಲ. ಬಸವನಗುಡಿಯಲ್ಲಿ ಪ್ರತಿವರ್ಷ ಎರಡು ದಿನ ನಡೆಯುತ್ತಿದ್ದ ಕಡಲೆಕಾಯಿ ಪರಿಷೆಯನ್ನು ಈ ಬಾರಿ ಐದು ದಿನಕ್ಕೆ ವಿಸ್ತರಿಸಲಾಗಿತ್ತು, ಒಟ್ಟು 12.50 ಲಕ್ಷ ಜನರು ಭಾಗವಹಿಸಿದ್ದರು’ ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.</p>.<p>ಬಸವನಗುಡಿ ದೊಡ್ಡಬಸವೇಶ್ವರ ದೇಗುಲ ಆವರಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಕಡಲೆಕಾಯಿ ಪರಿಷೆಯ ಯಶಸ್ಸಿಗೆ ಕಾರಣರಾದ ವಿವಿಧ ಇಲಾಖೆಗಳ ಅಧಿಕಾರಿ ಹಾಗೂ ಸಿಬ್ಬಂದಿಗೆ ಗೌರವ ಸಮರ್ಪಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಪರಿಷೆ ಹಾಗೂ ಕರಗ ಬೆಂಗಳೂರಿನ ಹೆಗ್ಗುರುತು. ಈ ಬಾರಿ ಪರಿಷೆಗೆ ಹೆಚ್ಚಿನ ಭಕ್ತರನ್ನು ಆಕರ್ಷಿಸಲು ದೀಪಾಲಂಕಾರ ಹಾಗೂ ಪುಷ್ಪಾಲಂಕಾರ ಮಾಡಲಾಗಿತ್ತು. ಇದು ಪರಿಷೆಗೆ ಬರುವವರ ಪ್ರಮಾಣವನ್ನು ಹೆಚ್ಚಿಸಿತು’ ಎಂದು ವಿವರಿಸಿದರು.</p>.<p>‘ವ್ಯಾಪಾರಸ್ಥರಿಗೆ ಅನುಕೂಲ ಆಗುವಂತೆ ಕರ ವಸೂಲಿಯನ್ನು ಎರಡು ವರ್ಷದಿಂದ ರದ್ದುಪಡಿಸಲಾಗಿದೆ. ಪ್ಲಾಸ್ಟಿಕ್ ನಿರ್ಬಂಧಿಸಲಾಗಿತ್ತು. ಆದರೂ ಪ್ಲಾಸ್ಟಿಕ್ ಬಳಸಿದ ಅಂಗಡಿಗಳಿಗೆ ದಂಡ ವಿಧಿಸಿ, ಆ ಅಂಗಡಿಗಳ ತೆರವಿಗೆ ಅಧಿಕಾರಿಗಳು ಕ್ರಮಕೈಗೊಂಡಿದ್ದರು’ ಎಂದರು.</p>.<p>ಪರಿಷೆ ಮುಗಿದ ಬಳಿಕ ಸ್ವಚ್ಛತಾ ಕಾರ್ಯ ಹಮ್ಮಿಕೊಂಡಾಗ 135 ಟನ್ ಒಣ ಮತ್ತು ಹಸಿ ಕಸ ಸಂಗ್ರಹವಾಗಿತ್ತು. ತ್ಯಾಜ್ಯ ವಿಲೇವಾರಿ ಮಾಡಲಾಗಿದೆ ಎಂದು ಹೇಳಿದರು.</p>.<p>ಬಿಎಂಎಸ್ ಕಾಲೇಜಿನ ಗುತ್ತಿಗೆ ಅವಧಿ ಮುಗಿದಿತ್ತು. ಈಗ ಗುತ್ತಿಗೆ ನವೀಕರಣಗೊಂಡಿದ್ದು ಇನ್ನು ಮುಂದೆ ದೇವಸ್ಥಾನಕ್ಕೆ ಪ್ರತಿ ವರ್ಷ ₹ 4-5 ಕೋಟಿ ಆದಾಯ ಬರಲಿದೆ ಎಂದು ತಿಳಿಸಿದರು.</p>.<p>‘ಪರಿಷೆಗಾಗಿ 800 ಪೊಲೀಸರು ಕರ್ತವ್ಯ ನಿರ್ವಹಿಸಿದ್ದಾರೆ. ಜತೆಗೆ ಸ್ವಯಂಸೇವಾ ಸಂಘಟನೆಗಳು ಭಾಗವಹಿಸಿ ಪ್ಲಾಸ್ಟಿಕ್ ಬಗ್ಗೆ ಜಾಗೃತಿ ಮೂಡಿಸಿವೆ. ಮುಂದಿನ ವರ್ಷ ದಾಖಲೆಯ ಪ್ರಮಾಣದಲ್ಲಿ ಭಕ್ತರು ಬರುವಂತೆ ನೋಡಿಕೊಳ್ಳಬೇಕಿದೆ’ ಎಂದರು.</p>.<p>ಎಐಸಿಸಿ ಕಾರ್ಯದರ್ಶಿ ಯು.ಬಿ. ವೆಂಕಟೇಶ್ ಮಾತನಾಡಿ, ‘ಮುಜರಾಯಿ ಸಚಿವರ ಅಧ್ಯಕ್ಷತೆಯಲ್ಲಿ ಈ ಬಾರಿಯ ಪರಿಷೆ ಬಹಳ ವ್ಯವಸ್ಥಿತವಾಗಿ ಹಾಗೂ ಅಚ್ಚುಕಟ್ಟಾಗಿ ಜರುಗಿತು. ಮೂರೂವರೆ ಸಾವಿರ ವ್ಯಾಪಾರಸ್ಥರು ಮಳಿಗೆಗಳನ್ನು ಹಾಕಿದ್ದರು’ ಎಂದು ಹೇಳಿದರು.</p>.<p>ಮುಜರಾಯಿ ಇಲಾಖೆಯ ಆಯುಕ್ತ ಶರತ್, ಡಿಸಿಪಿ ಲೋಕೇಶ್ ಬಿ. ಜಗಲಾಸರ್, ಎಸಿಪಿ ಮಂಜುನಾಥ, ಉಮಾಶಂಕರ, ಪಶ್ಚಿಮ ನಗರ ಪಾಲಿಕೆ ಆಯುಕ್ತ ರಾಜೇಂದ್ರ ಕೆ.ವಿ., ಎಇಇ ಶಶಿಕಲಾ, ಲೋಹಿತ್, ಸಚಿನ್ ಪಾಟೀಲ, ದೇವಸ್ಥಾನ ಸಿಬ್ಬಂದಿ ಭಾಗವಹಿಸಿದ್ದರು.</p>.<p><strong>ಬೆಂಗಳೂರು</strong> <strong>ಕರಗಕ್ಕೆ ತಯಾರಿ..</strong></p><p>ಬೆಂಗಳೂರು ಕರಗ 2026ರ ಏಪ್ರಿಲ್ ತಿಂಗಳಲ್ಲಿ ನಡೆಯಬಹುದು. ಆದ್ದರಿಂದ ಜನವರಿ ತಿಂಗಳಿಂದಲೇ ಕರಗದ ರೂಪುರೇಷೆ ತಯಾರಿಸಲಾಗುವುದು’ ಎಂದು ರಾಮಲಿಂಗಾರೆಡ್ಡಿ ತಿಳಿಸಿದರು. ‘ಕಳೆದ ಬಾರಿ ಸಾಲು ಸಾಲು ರಜೆಗಳು ಬಂದಿದ್ದರಿಂದ ಹಣ ಬಿಡುಗಡೆಯಲ್ಲಿ ಅನನುಕೂಲವಾಗಿತ್ತು. ಈ ಬಾರಿ ಮುಂಚಿತವಾಗಿಯೇ ಹಣ ಬಿಡುಗಡೆ ಮಾಡಲಾಗುವುದು. ಕರಗಕ್ಕೆ ಬೇರೆ ರಾಜ್ಯದ ಜನರೂ ಬರುವಂತೆ ಮಾಡಲು ಯೋಜನೆ ರೂಪಿಸಲಾಗುವುದು. ಈ ಬಾರಿ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗುವುದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>