‘ದಕ್ಷಿಣ ವಲಯದಲ್ಲಿ ಶ್ರೀನಗರ, ಬನಶಂಕರಿಯ ಬಿಡಿಎ ಸಂಕೀರ್ಣ, ಕೋರಮಂಗಲದ ಕ್ಲಬ್ ರಸ್ತೆ, ಮಡಿವಾಳ ಸಂತೆ, ಜಯನಗರ ಎರಡನೇ ಬ್ಲಾಕ್ನ ಮಳಿಗೆಗಳನ್ನು ದಿಢೀರ್ ತಪಾಸಣೆ ನಡೆಸಿದ್ದೇವೆ. ಮಹದೇವಪುರ ವಲಯದ ರಾಮಮೂರ್ತಿನಗರ ಮುಖ್ಯರಸ್ತೆ, ಹೊರಮಾವು, ಕಗ್ಗದಾಸಪುರ ಮುಖ್ಯರಸ್ತೆ, ಬೆಳ್ಳಂದೂರು, ದೇವಸಂದ್ರ, ದೊಡ್ಡನೆಕ್ಕುಂದಿ ಹಾಗೂ ವರ್ತೂರು ಮುಖ್ಯರಸ್ತೆಗಳ ಮಳಿಗೆಗಳಿಗೆ ದಾಳಿ ನಡೆಸಿದ್ದೇವೆ. ಪಶ್ಚಿಮ, ಪೂರ್ವ, ಬೊಮ್ಮನಹಳ್ಳಿ ಹಾಗೂ ಆರ್.ಆರ್.ನಗರ ವಲಯಗಳ ವಿವಿಧ ವಾರ್ಡ್ಗಳಲ್ಲಿರುವ ಅಂಗಡಿಗಳಲ್ಲಿ ತಪಾಸಣೆ ನಡೆಸಲಾಗಿದೆ’ ಎಂದು ಪಾಲಿಕೆ ಆರೋಗ್ಯ ವಿಭಾಗದ ಅಧಿಕಾರಿಗಳು ತಿಳಿಸಿದ್ದಾರೆ.